<p><strong>ಹಾರೋಹಳ್ಳಿ:</strong> ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, 10 ರಿಂದ 15 ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಎಂದು ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದಾರೆ.</p>.<p>ತಾಲ್ಲೂಕು ಆಡಳಿತದ ಮೂಲಕ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದ ರೈತ ಮುಖಂಡರು, ಗ್ರಾಮ ಲೆಕ್ಕಾಧಿಕಾರಿಗಳನ್ನು ತಾಲ್ಲೂಕಿನಿಂದ ಬೇರೆಡೆ ವರ್ಗಾವಣೆ ಮಾಡುವಂತೆ ಆಗ್ರಹಿಸಿದರು.</p>.<p>ಗಬ್ಬಾಡಿ ಸಮೀಪದ 40 ವರ್ಷದ ಬಳಿಕ ಜಾಗವೊಂದನ್ನು ನಕಲಿ ದಾಖಲೆ ಬಳಸಿ ಪೋಡಿ ಮಾಡಿಕೊಟ್ಟಿದ್ದಾರೆ. ಇದರ ತನಿಖೆ ಆಗಬೇಕು. ಸರ್ಕಾರಿ ಜಮೀನನ್ನು ಪರಭಾರೆ ವಿರುದ್ಧ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ಜಿಲ್ಲಾಡಳಿತ ಕೂಡಲೇ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳನ್ನು ವರ್ಗಾವಣೆ ಮಾಡದಿದ್ದರೆ ಬಾರುಕೋಲು ಚಳವಳಿ ನಡೆಸಲಾಗುವುದು ಎಂದು ರೈತ ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.</p>.<p>ರಾಜ್ಯ ರೈತ ಸಂಘದ ಚೀಲೂರು ಮುನಿರಾಜು, ಪ್ರಶಾಂತ್ ಹೊಸದುರ್ಗ, ನದೀಮ್ ಪಾಷಾ, ಜಯ ಕರ್ನಾಟಕ ಗಿರೀಶ್, ಬಸವರಾಜು, ಶಿವರಾಜು,ಕಿರಣ್ ಕುಮಾರ್, ಶಿವಕುಮಾರ್, ಮರಿಯಪ್ಪ, ರಂಗಪ್ಪ, ಉತ್ತರಿ ವೆಂಕಟೇಶ್, ಕಾಣಿಕ್ರಾಜ್, ಶ್ರೀನಿವಾಸ್, ಮುನಿಯಪ್ಪ ಸೇರಿದಂತೆ ರೈತ ಸಂಘದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, 10 ರಿಂದ 15 ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಎಂದು ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದಾರೆ.</p>.<p>ತಾಲ್ಲೂಕು ಆಡಳಿತದ ಮೂಲಕ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದ ರೈತ ಮುಖಂಡರು, ಗ್ರಾಮ ಲೆಕ್ಕಾಧಿಕಾರಿಗಳನ್ನು ತಾಲ್ಲೂಕಿನಿಂದ ಬೇರೆಡೆ ವರ್ಗಾವಣೆ ಮಾಡುವಂತೆ ಆಗ್ರಹಿಸಿದರು.</p>.<p>ಗಬ್ಬಾಡಿ ಸಮೀಪದ 40 ವರ್ಷದ ಬಳಿಕ ಜಾಗವೊಂದನ್ನು ನಕಲಿ ದಾಖಲೆ ಬಳಸಿ ಪೋಡಿ ಮಾಡಿಕೊಟ್ಟಿದ್ದಾರೆ. ಇದರ ತನಿಖೆ ಆಗಬೇಕು. ಸರ್ಕಾರಿ ಜಮೀನನ್ನು ಪರಭಾರೆ ವಿರುದ್ಧ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ಜಿಲ್ಲಾಡಳಿತ ಕೂಡಲೇ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳನ್ನು ವರ್ಗಾವಣೆ ಮಾಡದಿದ್ದರೆ ಬಾರುಕೋಲು ಚಳವಳಿ ನಡೆಸಲಾಗುವುದು ಎಂದು ರೈತ ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.</p>.<p>ರಾಜ್ಯ ರೈತ ಸಂಘದ ಚೀಲೂರು ಮುನಿರಾಜು, ಪ್ರಶಾಂತ್ ಹೊಸದುರ್ಗ, ನದೀಮ್ ಪಾಷಾ, ಜಯ ಕರ್ನಾಟಕ ಗಿರೀಶ್, ಬಸವರಾಜು, ಶಿವರಾಜು,ಕಿರಣ್ ಕುಮಾರ್, ಶಿವಕುಮಾರ್, ಮರಿಯಪ್ಪ, ರಂಗಪ್ಪ, ಉತ್ತರಿ ವೆಂಕಟೇಶ್, ಕಾಣಿಕ್ರಾಜ್, ಶ್ರೀನಿವಾಸ್, ಮುನಿಯಪ್ಪ ಸೇರಿದಂತೆ ರೈತ ಸಂಘದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>