<p><strong>ಕನಕಪುರ</strong>: ಬಲಿಜ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಷ್ಟ ಇಲ್ಲ ಎಂದು ಕರ್ನಾಟಕ ರಾಜ್ಯ ಬಲಿಜ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ಆರೋಪಿಸಿದರು.</p>.<p>ನಗರದಲ್ಲಿ ತಾಲ್ಲೂಕು ಬಲಿಜ ಸಂಘದ ವತಿಯಿಂದ ಬುಧವಾರ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟನೆ ಮಾತನಾಡಿದರು.</p>.<p>ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿ ಆಗಿದ್ದಾಗ 2ಎ ಮೀಸಲಾತಿಯಲ್ಲಿ ಇದ್ದ ಸಮುದಾಯವನ್ನು 3ಎ ಮೀಸಲಾತಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿವಾಗಿ ಅನ್ಯಾಯ ಮಾಡಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹೋರಾಟಕ್ಕೆ ಮಾನ್ಯತೆಯನ್ನೇ ನೀಡಿಲ್ಲ ಎಂದು ದೂರಿದರು.</p>.<p>ಮೀಸಲಾತಿಯಲ್ಲಿ ಆಗಿರುವ ಮೋಸ ಸರಿಪಡಿಸಿ 2ಎ ಮೀಸಲಾಗಿ ಸಿಗಬೇಕೆಂದು ರಾಜ್ಯಾದ್ಯಂತ ಹೋರಾಟ ನಡೆಸುತ್ತಿದ್ದು ಇದಕ್ಕೆ ಸಮುದಾಯದ ಜನರು ಪಕ್ಷಭೇದ ಮರೆತು ಹೋರಾಟಕ್ಕೆ ಕೈ ಜೋಡಿಸಬೇಕು. ಕನಕಪುರ ಕ್ಷೇತ್ರದವರೇ ಉಪಮುಖ್ಯಮಂತ್ರಿ ಇದ್ದು ಸಮುದಾಯಕ್ಕೆ ನ್ಯಾಯ ಸಿಗುವಂತೆ ಮಾಡಬೇಕೆಂದು ಮನವಿ ಮಾಡಿದರು.</p>.<p>40ಸಾವಿರ ಮತದಾರರಿರುವ ಕನಕಪುರ ತಾಲ್ಲೂಕಿನಲ್ಲಿ ಇನ್ನೂ ಸಮುದಾಯ ಭವನ ಇಲ್ಲ ಎನ್ನುವುದು ನೋವಿನ ಸಂಗತಿ ಎಂದರು.</p>.<p>ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ನಡೆಸುವ ವಿವಾಹ ಸೇರಿದಂತೆ ಶುಭ ಸಮಾರಂಭಗಳಿಗೆ ಸಮುದಾಯ ಭವನ ಉಚಿತವಾಗಿ ನೀಡಬೇಕು. ಶೈಕ್ಷಣಿಕವಾಗಿ ಅವಶ್ಯ ಇರುವ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು. </p>.<p>ತಾಲ್ಲೂಕು ಬಲಿಜ ಸಂಘದ ಗೌರವ ಅಧ್ಯಕ್ಷ ಗುಂಡಣ್ಣ ಮಾತನಾಡಿ, ಸಾವಿತ್ರಿ ಬಾಯಿ ಫುಲೆ ದೇಶದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿಯಾಗಿ ಎಲ್ಲ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟು ಸಾಧಕಿ ಎಂದು ಹೇಳಿದರು. </p>.<p>ಸಂಘದ ಅಧ್ಯಕ್ಷ ಬಾಲರಾಜು ಮಾತನಾಡಿ, ಸಮುದಾಯದ ಸಂಘಟನೆಗೆ ಹಿರಿಯ ಮುಖಂಡರು ಕೈಗೊಂಡಿರುವ ಎಲ್ಲ ಪ್ರಯತ್ನ ಮತ್ತು ಹೋರಟಕ್ಕೆ ಕೈಜೋಡಿಸಬೇಕಾಗಿದೆ ಎಂದರು.</p>.<p>ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ಅಧ್ಯಕ್ಷ ಮುನಿಕೃಷ್ಣ, ಉದ್ಯಮಿ ಲಕ್ಷ್ಮಿಕಾಂತ (ಕಾಂತಣ್ಣ) ಸೇರಿದಂತೆ ಕನಕಪುರ ತಾಲ್ಲೂಕು ಬಲಿಜ ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಬಲಿಜ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಷ್ಟ ಇಲ್ಲ ಎಂದು ಕರ್ನಾಟಕ ರಾಜ್ಯ ಬಲಿಜ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ಆರೋಪಿಸಿದರು.</p>.<p>ನಗರದಲ್ಲಿ ತಾಲ್ಲೂಕು ಬಲಿಜ ಸಂಘದ ವತಿಯಿಂದ ಬುಧವಾರ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟನೆ ಮಾತನಾಡಿದರು.</p>.<p>ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿ ಆಗಿದ್ದಾಗ 2ಎ ಮೀಸಲಾತಿಯಲ್ಲಿ ಇದ್ದ ಸಮುದಾಯವನ್ನು 3ಎ ಮೀಸಲಾತಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿವಾಗಿ ಅನ್ಯಾಯ ಮಾಡಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹೋರಾಟಕ್ಕೆ ಮಾನ್ಯತೆಯನ್ನೇ ನೀಡಿಲ್ಲ ಎಂದು ದೂರಿದರು.</p>.<p>ಮೀಸಲಾತಿಯಲ್ಲಿ ಆಗಿರುವ ಮೋಸ ಸರಿಪಡಿಸಿ 2ಎ ಮೀಸಲಾಗಿ ಸಿಗಬೇಕೆಂದು ರಾಜ್ಯಾದ್ಯಂತ ಹೋರಾಟ ನಡೆಸುತ್ತಿದ್ದು ಇದಕ್ಕೆ ಸಮುದಾಯದ ಜನರು ಪಕ್ಷಭೇದ ಮರೆತು ಹೋರಾಟಕ್ಕೆ ಕೈ ಜೋಡಿಸಬೇಕು. ಕನಕಪುರ ಕ್ಷೇತ್ರದವರೇ ಉಪಮುಖ್ಯಮಂತ್ರಿ ಇದ್ದು ಸಮುದಾಯಕ್ಕೆ ನ್ಯಾಯ ಸಿಗುವಂತೆ ಮಾಡಬೇಕೆಂದು ಮನವಿ ಮಾಡಿದರು.</p>.<p>40ಸಾವಿರ ಮತದಾರರಿರುವ ಕನಕಪುರ ತಾಲ್ಲೂಕಿನಲ್ಲಿ ಇನ್ನೂ ಸಮುದಾಯ ಭವನ ಇಲ್ಲ ಎನ್ನುವುದು ನೋವಿನ ಸಂಗತಿ ಎಂದರು.</p>.<p>ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ನಡೆಸುವ ವಿವಾಹ ಸೇರಿದಂತೆ ಶುಭ ಸಮಾರಂಭಗಳಿಗೆ ಸಮುದಾಯ ಭವನ ಉಚಿತವಾಗಿ ನೀಡಬೇಕು. ಶೈಕ್ಷಣಿಕವಾಗಿ ಅವಶ್ಯ ಇರುವ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು. </p>.<p>ತಾಲ್ಲೂಕು ಬಲಿಜ ಸಂಘದ ಗೌರವ ಅಧ್ಯಕ್ಷ ಗುಂಡಣ್ಣ ಮಾತನಾಡಿ, ಸಾವಿತ್ರಿ ಬಾಯಿ ಫುಲೆ ದೇಶದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿಯಾಗಿ ಎಲ್ಲ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟು ಸಾಧಕಿ ಎಂದು ಹೇಳಿದರು. </p>.<p>ಸಂಘದ ಅಧ್ಯಕ್ಷ ಬಾಲರಾಜು ಮಾತನಾಡಿ, ಸಮುದಾಯದ ಸಂಘಟನೆಗೆ ಹಿರಿಯ ಮುಖಂಡರು ಕೈಗೊಂಡಿರುವ ಎಲ್ಲ ಪ್ರಯತ್ನ ಮತ್ತು ಹೋರಟಕ್ಕೆ ಕೈಜೋಡಿಸಬೇಕಾಗಿದೆ ಎಂದರು.</p>.<p>ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ಅಧ್ಯಕ್ಷ ಮುನಿಕೃಷ್ಣ, ಉದ್ಯಮಿ ಲಕ್ಷ್ಮಿಕಾಂತ (ಕಾಂತಣ್ಣ) ಸೇರಿದಂತೆ ಕನಕಪುರ ತಾಲ್ಲೂಕು ಬಲಿಜ ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>