<p><strong>ಮಾಗಡಿ</strong>: ಕಾಡುಗೊಲ್ಲ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಕಾಡು ಗೊಲ್ಲರ ಸಂಘದ ವತಿಯಿಂದ ಉಪ ತಹಶೀಲ್ದಾರ್ ಪ್ರಭಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಡಿ.ಸುರೇಶ್ ಮಾತನಾಡಿ, ಕಾಡುಗೊಲ್ಲ ಸಮುದಾಯ ಒಂದು ಬುಡಕಟ್ಟು ಸಮುದಾಯ. ಇವರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಹಾಗಾಗಿ ಸರ್ಕಾರ ಈ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಅದಿಸೂಚನೆ ಹೊರಡಿಸಿದೆ. ಇದನ್ನು ಪರಿಗಣಿಸಿ ಕೆಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಹಾಗಾಗಿ ನಮ್ಮ ತಾಲ್ಲೂಕಿನಲ್ಲಿ ನೀಡಿದರೆ ಸರ್ಕಾರದಿಂದ ಬರುವ ಸೌಕರ್ಯ ಹಾಗೂ ಅನುದಾನ ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನಲ್ಲಿ ಸುಮಾರು 30 ಗೊಲ್ಲರ ಹಟ್ಟಿಗಳಿದ್ದು, ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಹಾಗಾಗಿ ಕೂಡಲೇ ಜಾತಿ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಲಾಯಿತು.</p>.<p>ಈ ವೇಳೆ ಮಾರಣ್ಣ, ಕಾಂತರಾಜು, ಶಿವರಾಜು, ಮಹಾಲಿಂಗಯ್ಯ, ನಾಗರಾಜು, ಶ್ರೀಪತಿಹಳ್ಳಿ ರಾಜಣ್ಣ, ತಮ್ಮಣ್ಣ, ಜಯರಾಮ್, ಗಿರಿಯಪ್ಪ, ಚಿಕ್ಕಣ್ಣ, ನಾಗೇಶ್, ಅಣ್ಣಯ್ಯ ಸೇರಿದಂತೆ ಕಾಡುಗೊಲ್ಲ ಸಂಘದ ಮುಖಂಡರುಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಕಾಡುಗೊಲ್ಲ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಕಾಡು ಗೊಲ್ಲರ ಸಂಘದ ವತಿಯಿಂದ ಉಪ ತಹಶೀಲ್ದಾರ್ ಪ್ರಭಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಡಿ.ಸುರೇಶ್ ಮಾತನಾಡಿ, ಕಾಡುಗೊಲ್ಲ ಸಮುದಾಯ ಒಂದು ಬುಡಕಟ್ಟು ಸಮುದಾಯ. ಇವರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಹಾಗಾಗಿ ಸರ್ಕಾರ ಈ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಅದಿಸೂಚನೆ ಹೊರಡಿಸಿದೆ. ಇದನ್ನು ಪರಿಗಣಿಸಿ ಕೆಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಹಾಗಾಗಿ ನಮ್ಮ ತಾಲ್ಲೂಕಿನಲ್ಲಿ ನೀಡಿದರೆ ಸರ್ಕಾರದಿಂದ ಬರುವ ಸೌಕರ್ಯ ಹಾಗೂ ಅನುದಾನ ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನಲ್ಲಿ ಸುಮಾರು 30 ಗೊಲ್ಲರ ಹಟ್ಟಿಗಳಿದ್ದು, ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಹಾಗಾಗಿ ಕೂಡಲೇ ಜಾತಿ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಲಾಯಿತು.</p>.<p>ಈ ವೇಳೆ ಮಾರಣ್ಣ, ಕಾಂತರಾಜು, ಶಿವರಾಜು, ಮಹಾಲಿಂಗಯ್ಯ, ನಾಗರಾಜು, ಶ್ರೀಪತಿಹಳ್ಳಿ ರಾಜಣ್ಣ, ತಮ್ಮಣ್ಣ, ಜಯರಾಮ್, ಗಿರಿಯಪ್ಪ, ಚಿಕ್ಕಣ್ಣ, ನಾಗೇಶ್, ಅಣ್ಣಯ್ಯ ಸೇರಿದಂತೆ ಕಾಡುಗೊಲ್ಲ ಸಂಘದ ಮುಖಂಡರುಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>