ಪುಟ್ಟಸ್ವಾಮಿ ಅವರು ತಮ್ಮ ಫೇಸ್ ಬುಕ್ ಬರಹದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಹಾಗೂ ರೆಡ್ಡಿ ಸಮುದಾಯದ ಗೌರವಕ್ಕೆ ಕುಂದು ಉಂಟು ಮಾಡುವಂತೆ ಬರೆದಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆಯೂ ಮುಜುಗರ ತರುವಂತಹ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ. ಇದು ಜಾತಿಗಳ ನಡುವೆ ವೈಷಮ್ಯ ಹುಟ್ಟಿಸುವಂತೆ ಇದೆ. ಇದರಿಂದ ಇಡೀ ರೆಡ್ಡಿ ಸಮುದಾಯದ ಜನರ ಭಾವನೆಗಳಿಗೆ ನೋವುಂಟಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಮುದಾಯದ ಜನರು ಮನವಿ ಮಾಡಿದರು.
ಸಂದೀಪ್, ಚಂದ್ರಶೇಖರ ರೆಡ್ಡಿ, ಸುರೇಶ ಇದ್ದರು.