<p><strong>ರಾಮನಗರ: </strong>ತಾಲ್ಲೂಕಿನ ಕೈಲಾಂಚ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಆನೆಗಳ ಹಿಂಡು ದಾಳಿ ನಡೆಸಿ ಬೆಳೆಗಳನ್ನು ನಾಶ ಮಾಡಿದೆ.</p>.<p>ವಿಭೂತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಯ್ಯದದೊಡ್ಡಿ ಸುತ್ತಲಿನ ಜಮೀನುಗಳಿಗೆ ಲಗ್ಗೆ ಇಟ್ಟ ಆನೆಗಳು ಚಿನ್ನಗಿರಿ ಕೃಷ್ಣ ಎಂಬುವರ ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಯನ್ನು ನಾಶ ಮಾಡಿವೆ.</p>.<p>ಚಂದ್ರಪ್ಪ ಅವರ ಜಮೀನಿನಲ್ಲಿನ ಹಾಗಲಕಾಯಿ ಹಾಗೂ ವೆಂಕಟಪ್ಪ ಅವರ ಜಮೀನಿನಲ್ಲಿನ ಈರೇಕಾಯಿ ಬೆಳೆಯೂ ಆನೆಗಳ ಪಾಲಾಗಿದೆ. ಚಿಕ್ಕಣ್ಣ ವೆಂಕಟಪ್ಪ ಅವರ ಜಮೀನಿನಲ್ಲಿನ ಟೊಮೆಟೊ, ತೆಂಗಿನ ಸಸಿಗಳು, ಸುತ್ತಲಿನ ಜಮೀನುಗಳಲ್ಲಿನ ಪಪ್ಪಾಯ ಬೆಳೆಯೂ ನಾಶವಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.</p>.<p>ಚನ್ನಪಟ್ಟಣದ ದೊಡ್ಡನಹಳ್ಳಿ ಹಾಗೂ ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಮೂರು ಆನೆಗಳ ಹಿಂಡು ಶುಕ್ರವಾರ ದಾಳಿ ನಡೆಸಿದೆ. ಸದ್ಯ ಕಾಡನಕುಪ್ಪೆ ಬಳಿ ಈ ಆನೆಗಳು ಇವೆ. ಇವುಗಳನ್ನು ಕಾಡಿಗೆ ಕಳುಹಿಸುವ ಪ್ರಯತ್ನ ನಡೆದಿದೆ ಎಂದು ವಲಯ ಅರಣ್ಯಧಿಕಾರಿ ಕಿರಣ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ತಾಲ್ಲೂಕಿನ ಕೈಲಾಂಚ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಆನೆಗಳ ಹಿಂಡು ದಾಳಿ ನಡೆಸಿ ಬೆಳೆಗಳನ್ನು ನಾಶ ಮಾಡಿದೆ.</p>.<p>ವಿಭೂತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಯ್ಯದದೊಡ್ಡಿ ಸುತ್ತಲಿನ ಜಮೀನುಗಳಿಗೆ ಲಗ್ಗೆ ಇಟ್ಟ ಆನೆಗಳು ಚಿನ್ನಗಿರಿ ಕೃಷ್ಣ ಎಂಬುವರ ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಯನ್ನು ನಾಶ ಮಾಡಿವೆ.</p>.<p>ಚಂದ್ರಪ್ಪ ಅವರ ಜಮೀನಿನಲ್ಲಿನ ಹಾಗಲಕಾಯಿ ಹಾಗೂ ವೆಂಕಟಪ್ಪ ಅವರ ಜಮೀನಿನಲ್ಲಿನ ಈರೇಕಾಯಿ ಬೆಳೆಯೂ ಆನೆಗಳ ಪಾಲಾಗಿದೆ. ಚಿಕ್ಕಣ್ಣ ವೆಂಕಟಪ್ಪ ಅವರ ಜಮೀನಿನಲ್ಲಿನ ಟೊಮೆಟೊ, ತೆಂಗಿನ ಸಸಿಗಳು, ಸುತ್ತಲಿನ ಜಮೀನುಗಳಲ್ಲಿನ ಪಪ್ಪಾಯ ಬೆಳೆಯೂ ನಾಶವಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.</p>.<p>ಚನ್ನಪಟ್ಟಣದ ದೊಡ್ಡನಹಳ್ಳಿ ಹಾಗೂ ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಮೂರು ಆನೆಗಳ ಹಿಂಡು ಶುಕ್ರವಾರ ದಾಳಿ ನಡೆಸಿದೆ. ಸದ್ಯ ಕಾಡನಕುಪ್ಪೆ ಬಳಿ ಈ ಆನೆಗಳು ಇವೆ. ಇವುಗಳನ್ನು ಕಾಡಿಗೆ ಕಳುಹಿಸುವ ಪ್ರಯತ್ನ ನಡೆದಿದೆ ಎಂದು ವಲಯ ಅರಣ್ಯಧಿಕಾರಿ ಕಿರಣ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>