ಗುಳಕಮಲೆ ಬಳಿಯ ಬನ್ನೇರುಘಟ್ಟ ರಸ್ತೆ ವಿಜಯ್ಕುಮಾರ್ ಎಂಬುವರ ತೋಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಗಾಂಜಾ ಸೊಪ್ಪು ಮತ್ತು ನಗದು ವಶಕ್ಕೆ ಪಡೆದಿರುವ ಎಸ್ಐ ವೆಂಕಟೇಶ್, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.