<p><strong>ರಾಮನಗರ</strong>: ‘ಕ್ಷೇತ್ರವನ್ನು 25 ವರ್ಷ ಆಳಿದವರು ಯಾವುದೇ ಅಭಿವೃದ್ದಿ ಮಾಡಲಿಲ್ಲ. ನಾನು ಶಾಸಕನಾದ ಬಳಿಕ ಕ್ಷೇತ್ರದಲ್ಲಿ ಸುಮಾರು ₹1,600 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p>.<p>ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮದಲ್ಲಿ ಕೇತೋಹಳ್ಳಿ– ಕೆಂಜಿಗರಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘₹800 ಕೋಟಿ ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಾಮಗಾರಿ, ಅರ್ಕಾವತಿ ದಂಡೆಯಲ್ಲಿ ₹157 ಕೋಟಿ ವೆಚ್ಚದಲ್ಲಿ ಹೈಟೆಕ್ ಉದ್ಯಾನ ಕಾಮಗಾರಿ ಪ್ರಗತಿಯಲಿದೆ. ನಗರದ ವ್ಯಾಪ್ತಿಯ ಬಡವರಿಗೆ ನಿವೇಶನ ಹಂಚಲು ಜಾಗ ಗುರುತಿಸಲಾಗಿದೆ’ ಎಂದರು.</p>.<p>‘ಮಾಯಗಾನಹಳ್ಳಿ ಭಾಗದ ಜನರ ಬಹು ದಿನಗಳ ಜನರ ಬೇಡಿಕೆಯಂತೆ ಇಲ್ಲಿನ ರಸ್ತೆಯನ್ನು ₹2.80 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿ ನೀಡಿದ ಶಕ್ತಿಯಿಂದ ಇಷ್ಟೆಲ್ಲಾ ಸಾಧ್ಯವಾಗಿದೆ. ಮಾಯಗಾನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್ಟಿಪಿ ಯೋಜನೆಯಡಿ ₹1 ಕೋಟಿ ಅನುದಾನದಲ್ಲಿ ಕೆಲಸ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್ ಮಾತನಾಡಿ, ‘ರಜಾ ದಿನಗಳನ್ನು ಸಹ ಲೆಕ್ಕಿಸದೆ ಇಕ್ಬಾಲ್ ಹುಸೇನ್ ಸಾಹೇಬ್ರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪ್ರವಾಹದಿಂದಾಗಿ ಒಡೆದಿದ್ದ ಬಕ್ಷಿ ಕೆರೆ ಅಭಿವೃದ್ಧಿಗೂ ಶಾಸಕರು ಕ್ರಮ ಕೈಗೊಂಡಿದ್ದಾರೆ’ ಎಂದು ಹೊಗಳಿದರು.</p>.<p>ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿ.ಎಚ್. ರಾಜು, ‘ಹಿಂದಿನ ಶಾಸಕರು ಜನರ ಕೈಗೆ ಸಿಗುತ್ತಿರಲಿಲ್ಲ. ಆದರೆ, ಇಕ್ಬಾಲ್ ಹುಸೇನ್ ಅವರು ಜನರು ಇರುವಲ್ಲಿಗೇ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗಳನ್ನು ಪರಿಹರಿಸಿದ್ದಾರೆ’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ಸ್ಥಳೀಯ ಮುಖಂಡರಾದ ಸಿ. ಲೋಕೇಶ್, ಎಂ.ಎಚ್. ರಂಜಿತ್ಕುಮಾರ್, ಚಿಕ್ಕಸ್ವಾಮಿ, ಎಂ. ರೇವಣ್ಣ, ಕೆ. ರವಿ, ಗುರುಪ್ರಸಾದ್, ಶಿವಕುಮಾರ್, ಮಹದೇವಯ್ಯ, ಜಯರಾಮಯ್ಯ, ಕಿರಣ್, ರಾಮಣ್ಣ, ಶಿವಲಿಂಗಯ್ಯ, ಮಂಜುನಾಥ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಕ್ಷೇತ್ರವನ್ನು 25 ವರ್ಷ ಆಳಿದವರು ಯಾವುದೇ ಅಭಿವೃದ್ದಿ ಮಾಡಲಿಲ್ಲ. ನಾನು ಶಾಸಕನಾದ ಬಳಿಕ ಕ್ಷೇತ್ರದಲ್ಲಿ ಸುಮಾರು ₹1,600 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p>.<p>ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮದಲ್ಲಿ ಕೇತೋಹಳ್ಳಿ– ಕೆಂಜಿಗರಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘₹800 ಕೋಟಿ ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಾಮಗಾರಿ, ಅರ್ಕಾವತಿ ದಂಡೆಯಲ್ಲಿ ₹157 ಕೋಟಿ ವೆಚ್ಚದಲ್ಲಿ ಹೈಟೆಕ್ ಉದ್ಯಾನ ಕಾಮಗಾರಿ ಪ್ರಗತಿಯಲಿದೆ. ನಗರದ ವ್ಯಾಪ್ತಿಯ ಬಡವರಿಗೆ ನಿವೇಶನ ಹಂಚಲು ಜಾಗ ಗುರುತಿಸಲಾಗಿದೆ’ ಎಂದರು.</p>.<p>‘ಮಾಯಗಾನಹಳ್ಳಿ ಭಾಗದ ಜನರ ಬಹು ದಿನಗಳ ಜನರ ಬೇಡಿಕೆಯಂತೆ ಇಲ್ಲಿನ ರಸ್ತೆಯನ್ನು ₹2.80 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿ ನೀಡಿದ ಶಕ್ತಿಯಿಂದ ಇಷ್ಟೆಲ್ಲಾ ಸಾಧ್ಯವಾಗಿದೆ. ಮಾಯಗಾನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್ಟಿಪಿ ಯೋಜನೆಯಡಿ ₹1 ಕೋಟಿ ಅನುದಾನದಲ್ಲಿ ಕೆಲಸ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್ ಮಾತನಾಡಿ, ‘ರಜಾ ದಿನಗಳನ್ನು ಸಹ ಲೆಕ್ಕಿಸದೆ ಇಕ್ಬಾಲ್ ಹುಸೇನ್ ಸಾಹೇಬ್ರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪ್ರವಾಹದಿಂದಾಗಿ ಒಡೆದಿದ್ದ ಬಕ್ಷಿ ಕೆರೆ ಅಭಿವೃದ್ಧಿಗೂ ಶಾಸಕರು ಕ್ರಮ ಕೈಗೊಂಡಿದ್ದಾರೆ’ ಎಂದು ಹೊಗಳಿದರು.</p>.<p>ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿ.ಎಚ್. ರಾಜು, ‘ಹಿಂದಿನ ಶಾಸಕರು ಜನರ ಕೈಗೆ ಸಿಗುತ್ತಿರಲಿಲ್ಲ. ಆದರೆ, ಇಕ್ಬಾಲ್ ಹುಸೇನ್ ಅವರು ಜನರು ಇರುವಲ್ಲಿಗೇ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗಳನ್ನು ಪರಿಹರಿಸಿದ್ದಾರೆ’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ಸ್ಥಳೀಯ ಮುಖಂಡರಾದ ಸಿ. ಲೋಕೇಶ್, ಎಂ.ಎಚ್. ರಂಜಿತ್ಕುಮಾರ್, ಚಿಕ್ಕಸ್ವಾಮಿ, ಎಂ. ರೇವಣ್ಣ, ಕೆ. ರವಿ, ಗುರುಪ್ರಸಾದ್, ಶಿವಕುಮಾರ್, ಮಹದೇವಯ್ಯ, ಜಯರಾಮಯ್ಯ, ಕಿರಣ್, ರಾಮಣ್ಣ, ಶಿವಲಿಂಗಯ್ಯ, ಮಂಜುನಾಥ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>