ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿತೃ ಪೂಜೆ ನೆರವೇರಿಸಿದ ಡಿಕೆಶಿ

Last Updated 12 ಸೆಪ್ಟೆಂಬರ್ 2021, 5:10 IST
ಅಕ್ಷರ ಗಾತ್ರ

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅವರು ತಾಲ್ಲೂಕಿನ ದೊಡ್ಡಾಲಹಳ್ಳಿಯಲ್ಲಿ ತಮ್ಮ ತಂದೆ ಕೆಂಪೇಗೌಡರ ಸಮಾಧಿಗೆ ಶುಕ್ರವಾರ ಪಿತೃ ಪೂಜೆ ನೆರವೇರಿಸಿದರು.

ಪ್ರತಿವ‍ರ್ಷ ಗೌರಿ, ಗಣೇಶ ಹಬ್ಬದ ಸಮಯದಲ್ಲಿ ಪಿತೃ ಪೂಜೆ ನೆರವೇರಿಸಿಕೊಂಡು ಬಂದಿರುವ ಅವರು, ತಾಯಿ ಗೌರಮ್ಮ ಅವರೊಂದಿಗೆ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದರು.

ಡಿ.ಕೆ. ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಹಾಗೂ ಮಕ್ಕಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT