ಇದಕ್ಕೆ ಆಕ್ಷೇಪಿಸಿದ ಲಿಂಗೇಶ್ ಕುಮಾರ್ ಇದನ್ನು ಹೇಳಲು ಬೇರೆಯವರಿಗೆ ಅಧಿಕಾರವಿಲ್ಲ. ಬಮೂಲ್ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದಂತೆ ನನಗೆ ಅವಕಾಶ ನೀಡಿ ಎಂದು ಪಟ್ಟುಹಿಡಿದರು. ಇದರಿಂದ ಬಮೂಲ್ ಶಿಬಿರಾಧಿಕಾರಿ ಹೇಮಂತ್ ಗೊಂದಲಕ್ಕೆ ಒಳಗಾಗುವಂತಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು, ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ಹೇಮಂತ್ ಅವರನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೇಮಂತ್, ಬಮೂಲ್ ಎಂ.ಡಿ ಬಿಟ್ಟುಕೊಡುವಂತೆ ಹೇಳಿದ್ದಾರೆ ಎಂದು ತಿಳಿಸಿದರು.