ರಾಮನಗರ: ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಆಸ್ಪತ್ರೆಗಳ ಆಡಳಿತ ಮಂಡಳಿ ಜೊತೆ ಮಾತನಾಡಿದ ಸಚಿವರು, ಕೋವಿಡ್ ಸೋಂಕಿತರಿಗೆ ಇನ್ನಷ್ಟು ಉತ್ತಮ ಚಿಕಿತ್ಸೆ ನೀಡಬೇಕು. ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ರಾಕೇಶ್ಕುಮಾರ್, ಜಿ.ಪಂ. ಸಿಇಒ ಇಕ್ರಂ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಜೊತೆಗಿದ್ದರು.