ರಾಮನಗರ: ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಶನಿವಾರ ನಡೆದ ಹರ್ ಘರ್ ತಿರಂಗಾ ಯಾತ್ರೆ ವೇಳೆ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ನಾಡಗೀತೆಗೆ ಅಗೌರವ ತೋರಿದ ಘಟನೆ ನಡೆಯಿತು.
ವಿದ್ಯಾರ್ಥಿಗಳು ನಾಡಗೀತೆ ಹಾಡುವ ವೇಳೆ ವೇದಿಕೆಯಲ್ಲಿದ್ದ ಸಚಿವರು ಬಿಜೆಪಿ ಮುಖಂಡರ ಜೊತೆ ಮಾತುಕತೆಯಲ್ಲಿ ನಿರತರಾಗಿದ್ದರು.
ಕೇಂದ್ರ ಸಚಿವರ ಜೊತೆ ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೌತಮ್ ಗೌಡ ಇದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ನಾಡಗೀತೆ ಗಾಯನದ ವೇಳೆ ಹೆಚ್ಚಿನವರು ವೇದಿಕೆಯತ್ತ ಕೈಬೀಸುತ್ತಿರುವುದು, ಫೋಟೊ-ವಿಡಿಯೊಗಳನ್ನು ತೆಗೆಯುತ್ತಿರುವುದು, ಪರಸ್ಪರ ಮಾತನಾಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.