<p><strong>ಮಾಗಡಿ</strong>: ಹಿರಿಯ ಅಂಗವಿಕಲ ನಾಗರಿಕರಿಗೆ ಅವಶ್ಯಕವಾಗಿ ಸಾಧನ ಸಲಕರಣೆ ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣ ಪ್ರಭಾರ ಅಧಿಕಾರಿ ಶ್ರುತಿ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಹಾಗೂ ಅಲಿಂಕೋ ಸಂಸ್ಥೆ ವತಿಯಿಂದ ಹಿರಿಯ ನಾಗರಿಕರ ಮೌಲ್ಯಮಾಪನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 5,200ಕ್ಕೂ ಹೆಚ್ಚು ಅಂಗವಿಕಲರಿದ್ದು ಅವರಿಗೆ ಬೇಕಾಗಿರುವ ಗುಣಮಟ್ಟದ ಸಲಕರಣೆ ನೀಡುವುದರಿಂದ ಅವರು ಯಾರ ಸಹಾಯವಿಲ್ಲದೆ ಓಡಾಡಲು ಅನುಕೂಲವಾಗುತ್ತದೆ. ಇದರ ಪ್ರಯೋಜನವನ್ನು ತಾಲ್ಲೂಕಿನ ಹಿರಿಯ ಅಂಗವಿಕಲರು ಪಡೆದುಕೊಳ್ಳಬೇಕು ಎಂದರು.</p>.<p>ತಾಲ್ಲೂಕು ಅಂಗವಿಕಲರ ಸಂಯೋಜಕ ಅಸ್ಸಾಂ ಪಾಷ ಮಾತನಾಡಿ, ತಾಲ್ಲೂಕಿನಲ್ಲಿರುವ 5 ಸಾವಿರಕ್ಕೂ ಹೆಚ್ಚು ಅಂಗವಿಕಲರಿಗೆ ಇಲಾಖೆಯಿಂದ ಈಗಾಗಲೇ ತ್ರೀಚಕ್ರ ವಾಹನ, ವಿವಾಹ ಪ್ರೋತ್ಸಾಹ ಧನ, ಶಿಶುಪಾಲನ ಭತ್ಯೆ, ವೀಲ್ ಚೇರ್, ವಾಕಿಂಗ್ ಸ್ಟಿಕ್ ನೀಡಲಾಗಿದೆ ಎಂದು ತಿಳಿಸಿದರು.</p>.<p>ಶಿಬಿರದಲ್ಲಿ ತಾಲೂಕಿನ ಅನೇಕ ಹಿರಿಯ ಅಂಗವಿಕಲರು ಮೌಲ್ಯಮಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಹಿರಿಯ ಅಂಗವಿಕಲ ನಾಗರಿಕರಿಗೆ ಅವಶ್ಯಕವಾಗಿ ಸಾಧನ ಸಲಕರಣೆ ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣ ಪ್ರಭಾರ ಅಧಿಕಾರಿ ಶ್ರುತಿ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಹಾಗೂ ಅಲಿಂಕೋ ಸಂಸ್ಥೆ ವತಿಯಿಂದ ಹಿರಿಯ ನಾಗರಿಕರ ಮೌಲ್ಯಮಾಪನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 5,200ಕ್ಕೂ ಹೆಚ್ಚು ಅಂಗವಿಕಲರಿದ್ದು ಅವರಿಗೆ ಬೇಕಾಗಿರುವ ಗುಣಮಟ್ಟದ ಸಲಕರಣೆ ನೀಡುವುದರಿಂದ ಅವರು ಯಾರ ಸಹಾಯವಿಲ್ಲದೆ ಓಡಾಡಲು ಅನುಕೂಲವಾಗುತ್ತದೆ. ಇದರ ಪ್ರಯೋಜನವನ್ನು ತಾಲ್ಲೂಕಿನ ಹಿರಿಯ ಅಂಗವಿಕಲರು ಪಡೆದುಕೊಳ್ಳಬೇಕು ಎಂದರು.</p>.<p>ತಾಲ್ಲೂಕು ಅಂಗವಿಕಲರ ಸಂಯೋಜಕ ಅಸ್ಸಾಂ ಪಾಷ ಮಾತನಾಡಿ, ತಾಲ್ಲೂಕಿನಲ್ಲಿರುವ 5 ಸಾವಿರಕ್ಕೂ ಹೆಚ್ಚು ಅಂಗವಿಕಲರಿಗೆ ಇಲಾಖೆಯಿಂದ ಈಗಾಗಲೇ ತ್ರೀಚಕ್ರ ವಾಹನ, ವಿವಾಹ ಪ್ರೋತ್ಸಾಹ ಧನ, ಶಿಶುಪಾಲನ ಭತ್ಯೆ, ವೀಲ್ ಚೇರ್, ವಾಕಿಂಗ್ ಸ್ಟಿಕ್ ನೀಡಲಾಗಿದೆ ಎಂದು ತಿಳಿಸಿದರು.</p>.<p>ಶಿಬಿರದಲ್ಲಿ ತಾಲೂಕಿನ ಅನೇಕ ಹಿರಿಯ ಅಂಗವಿಕಲರು ಮೌಲ್ಯಮಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>