<p><strong>ರಾಮನಗರ:</strong> ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರತ್ಯೇಕಗೊಂಡು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿ ನಗರದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾದರು.</p>.<p>ಸುನೀಲ್ ಕುಮಾರ್ ಮತ್ತು ನಾಗವೇಣಿ ದಂಪತಿ ಮನಸ್ತಾಪ ಮರೆತು ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ಹಾರ ಬದಲಿಸಿಕೊಂಡು ಹೊಸ ಜೀವನಕ್ಕೆ ಅಡಿ ಇಟ್ಟರು.</p>.<p>ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಒಂದೂವರೆ ವರ್ಷದ ಮಗು ಇದೆ. ಆರಂಭದಲ್ಲಿ ಹೊಂದಾಣಿಕೆಯಿಂದ ಇದ್ದ ದಂಪತಿ ನಡುವೆ ಭಿನ್ನಾಭಿಪ್ರಾಯ ಮತ್ತು ಕೌಟುಂಬಿಕ ಕಲಹ ಶುರುವಾಗಿತ್ತು. ನಂತರ, ಇಬ್ಬರೂ ವಿಚ್ಛೇದನಕ್ಕೆ ಮುಂದಾಗಿದ್ದರು.</p>.<p>ಅದಾಲತ್ನಲ್ಲಿ ದಂಪತಿ ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ವಿ. ರೇಣುಕ ಅವರು ಒಣ ಪ್ರತಿಷ್ಠೆ ಮತ್ತು ಭಿನ್ನಾಭಿಪ್ರಾಯ ಬದಿಗಿಟ್ಟು ಕೂಡಿ ಬಾಳುವಂತೆ ತಿಳಿ ಹೇಳಿದರು.</p>.<p>ನ್ಯಾಯಾಧೀಶರ ಮಾತಿಗೆ ಒಪ್ಪಿಕೊಂಡ ದಂಪತಿ ತಮ್ಮ ವಕೀಲರು ಹಾಗೂ ಕೋರ್ಟ್ ಸಿಬ್ಬಂದಿ ಸಮ್ಮುಖದಲ್ಲಿ ಪರಸ್ಪರ ಹಾರ ಬದಲಿಸಿಕೊಂಡರು. ಕೊನೆಯವರೆಗೂ ಒಂದಾಗಿ ಬಾಳುವುದಾಗಿ ನ್ಯಾಯಾಧೀಶರಿಗೆ ಭರವಸೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಸವಿತ ಪಿ.ಆರ್ ಹಾಗೂ ಇತರರು ಈ ಕ್ಷಣಗಳಿಗೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರತ್ಯೇಕಗೊಂಡು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿ ನಗರದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾದರು.</p>.<p>ಸುನೀಲ್ ಕುಮಾರ್ ಮತ್ತು ನಾಗವೇಣಿ ದಂಪತಿ ಮನಸ್ತಾಪ ಮರೆತು ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ಹಾರ ಬದಲಿಸಿಕೊಂಡು ಹೊಸ ಜೀವನಕ್ಕೆ ಅಡಿ ಇಟ್ಟರು.</p>.<p>ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಒಂದೂವರೆ ವರ್ಷದ ಮಗು ಇದೆ. ಆರಂಭದಲ್ಲಿ ಹೊಂದಾಣಿಕೆಯಿಂದ ಇದ್ದ ದಂಪತಿ ನಡುವೆ ಭಿನ್ನಾಭಿಪ್ರಾಯ ಮತ್ತು ಕೌಟುಂಬಿಕ ಕಲಹ ಶುರುವಾಗಿತ್ತು. ನಂತರ, ಇಬ್ಬರೂ ವಿಚ್ಛೇದನಕ್ಕೆ ಮುಂದಾಗಿದ್ದರು.</p>.<p>ಅದಾಲತ್ನಲ್ಲಿ ದಂಪತಿ ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ವಿ. ರೇಣುಕ ಅವರು ಒಣ ಪ್ರತಿಷ್ಠೆ ಮತ್ತು ಭಿನ್ನಾಭಿಪ್ರಾಯ ಬದಿಗಿಟ್ಟು ಕೂಡಿ ಬಾಳುವಂತೆ ತಿಳಿ ಹೇಳಿದರು.</p>.<p>ನ್ಯಾಯಾಧೀಶರ ಮಾತಿಗೆ ಒಪ್ಪಿಕೊಂಡ ದಂಪತಿ ತಮ್ಮ ವಕೀಲರು ಹಾಗೂ ಕೋರ್ಟ್ ಸಿಬ್ಬಂದಿ ಸಮ್ಮುಖದಲ್ಲಿ ಪರಸ್ಪರ ಹಾರ ಬದಲಿಸಿಕೊಂಡರು. ಕೊನೆಯವರೆಗೂ ಒಂದಾಗಿ ಬಾಳುವುದಾಗಿ ನ್ಯಾಯಾಧೀಶರಿಗೆ ಭರವಸೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಸವಿತ ಪಿ.ಆರ್ ಹಾಗೂ ಇತರರು ಈ ಕ್ಷಣಗಳಿಗೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>