<p><strong>ಮಾಗಡಿ (ರಾಮನಗರ):</strong> ‘ನಮ್ಮ ಜಿಲ್ಲೆಗೆ ಬಂದು ಶಾಸಕರಾಗಿ, ಸಂಸದರಾಗಿ ಮುಖ್ಯಮಂತ್ರಿ ಮತ್ತು ಪ್ರಧಾನಿ ಹುದ್ದೆಗೇರಿ ಅಧಿಕಾರ ಅನುಭವಿಸಿದವರು ಅಭಿವೃದ್ದಿಯ ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆಂದು ತಿಳಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.</p><p>ತಾಲ್ಲೂಕಿನ ಚಕ್ರಭಾವಿಯಲ್ಲಿ ಬುಧವಾರ ನಡೆದ ಮಾಡಬಾಳ್ ಮತ್ತು ಕಸಬಾ ಹೋಬಳಿಯ 18 ಕೆರೆಗಳಿಗೆ ನೀರು ತುಂಬಿಸುವ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಇಲ್ಲಿಂದ ದೊಡ್ಡ ಸ್ಥಾನಕ್ಕೆ ಹೋಗಿ ಏನೂ ಮಾಡದ ಅವರು, ಈಗ ಬುಡುಬುಡುಕೆ ಆಡಿಸುತ್ತಾ ಬಣ್ಣದ ಮಾತುಗಳನ್ನಾಡುತ್ತಿದ್ದಾರೆ. ಚುನಾವಣೆ ಬಂದಾಗ ಕಣ್ಣೀರು ಹಾಕುತ್ತಾರೆ’ ಎಂದು ಟೀಕಿಸಿದರು.</p><p>‘ಬರಡು ಭೂಮಿ ಮಾಗಡಿಗೆ ನಾವು ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದ ನೀರನ್ನು ತರುತ್ತಿದ್ದೇವೆ. ರೈತರ ಮಕ್ಕಳು ಮತ್ತು ಮಣ್ಣಿನ ಮಕ್ಕಳು ಎನಿಸಿಕೊಂಡವರು ಯಾಕೆ ಇಂತಹ ಒಂದೇ ಒಂದು ಯೋಜನೆ ಮಾಡಲಿಲ್ಲ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರನ್ನು ಕೇಳಬೇಕು’ ಎಂದು ಕರೆ ನೀಡಿದರು.</p>.<div><blockquote>ಮುಖ್ಯಮಂತ್ರಿ ವಿಚಾರವಾಗಿ ನಾನೇನೂ ಮಾತನಾಡುವುದಿಲ್ಲ. ಅದಕ್ಕೆ ಕಾಲವೇ ಉತ್ತರ ನೀಡುತ್ತದೆ. ಸದ್ಯದಲ್ಲೇ ಆ ಕುರಿತು ನಿಮ್ಮೆಲ್ಲರನ್ನು ಭೇಟಿಯಾಗಿ ಮಾತನಾಡುತ್ತೇನೆ </blockquote><span class="attribution">ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ (ರಾಮನಗರ):</strong> ‘ನಮ್ಮ ಜಿಲ್ಲೆಗೆ ಬಂದು ಶಾಸಕರಾಗಿ, ಸಂಸದರಾಗಿ ಮುಖ್ಯಮಂತ್ರಿ ಮತ್ತು ಪ್ರಧಾನಿ ಹುದ್ದೆಗೇರಿ ಅಧಿಕಾರ ಅನುಭವಿಸಿದವರು ಅಭಿವೃದ್ದಿಯ ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆಂದು ತಿಳಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.</p><p>ತಾಲ್ಲೂಕಿನ ಚಕ್ರಭಾವಿಯಲ್ಲಿ ಬುಧವಾರ ನಡೆದ ಮಾಡಬಾಳ್ ಮತ್ತು ಕಸಬಾ ಹೋಬಳಿಯ 18 ಕೆರೆಗಳಿಗೆ ನೀರು ತುಂಬಿಸುವ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಇಲ್ಲಿಂದ ದೊಡ್ಡ ಸ್ಥಾನಕ್ಕೆ ಹೋಗಿ ಏನೂ ಮಾಡದ ಅವರು, ಈಗ ಬುಡುಬುಡುಕೆ ಆಡಿಸುತ್ತಾ ಬಣ್ಣದ ಮಾತುಗಳನ್ನಾಡುತ್ತಿದ್ದಾರೆ. ಚುನಾವಣೆ ಬಂದಾಗ ಕಣ್ಣೀರು ಹಾಕುತ್ತಾರೆ’ ಎಂದು ಟೀಕಿಸಿದರು.</p><p>‘ಬರಡು ಭೂಮಿ ಮಾಗಡಿಗೆ ನಾವು ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದ ನೀರನ್ನು ತರುತ್ತಿದ್ದೇವೆ. ರೈತರ ಮಕ್ಕಳು ಮತ್ತು ಮಣ್ಣಿನ ಮಕ್ಕಳು ಎನಿಸಿಕೊಂಡವರು ಯಾಕೆ ಇಂತಹ ಒಂದೇ ಒಂದು ಯೋಜನೆ ಮಾಡಲಿಲ್ಲ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರನ್ನು ಕೇಳಬೇಕು’ ಎಂದು ಕರೆ ನೀಡಿದರು.</p>.<div><blockquote>ಮುಖ್ಯಮಂತ್ರಿ ವಿಚಾರವಾಗಿ ನಾನೇನೂ ಮಾತನಾಡುವುದಿಲ್ಲ. ಅದಕ್ಕೆ ಕಾಲವೇ ಉತ್ತರ ನೀಡುತ್ತದೆ. ಸದ್ಯದಲ್ಲೇ ಆ ಕುರಿತು ನಿಮ್ಮೆಲ್ಲರನ್ನು ಭೇಟಿಯಾಗಿ ಮಾತನಾಡುತ್ತೇನೆ </blockquote><span class="attribution">ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>