‘ರಾಮನಗರ ಜಿಲ್ಲೆಯಲ್ಲಿ ಕ್ರೈಸ್ತರು ತೀರ ವಿರಳವಾಗಿದ್ದಾರೆ. ಇಲ್ಲಿ ಅಷ್ಟು ದೊಡ್ಡ ಪ್ರತಿಮೆ ಅಗತ್ಯ ಇರಲಿಲ್ಲ. ಸರ್ದಾರ್ ವಲ್ಲಬಭಾಯ್ ಪಟೇಲ್ ಪ್ರತಿಮೆ ನಿರ್ಮಾಣವನ್ನು ಇದೇ ಶಾಸಕರು ವಿರೋಧಿಸಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, ಸೋನಿಯಾ ಗಾಂಧಿ ಅವರನ್ನು ಓಲೈಸಲು ಏಸು ಪ್ರತಿಮೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ’ ಎಂದು ಮತ್ತೊಬ್ಬರು ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಕಪಾಲಿ ಬೆಟ್ಟ ಹಿಂದುಗಳ ಪವಿತ್ರ ಸ್ಥಳವಾಗಿದ್ದು, ಅದಕ್ಕೆ ಆಂದೋಲನ ರೂಪಿಸಲಾಗುವುದು ಎಂದು ಇನ್ನೊಬ್ಬರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.