ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಮನೆ ದೇವರು ಕೆಂಕೇರಮ್ಮ ಮತ್ತು ತಾಲ್ಲೂಕಿನ ಶಕ್ತಿದೇವತೆ ಕಬ್ಬಾಳಮ್ಮ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.
ದೇವಿಗೆ ಮಡಿ ತುಂಬಿಸುವ ಧಾರ್ಮಿಕ ಕಾರ್ಯ ನೆರವೇರಿಸಿದರು. ದೀಪಾವಳಿ ಹಬ್ಬವನ್ನು ಶಾಂತಿ ಮತ್ತು ಸಂಭ್ರಮದಿಂದ ಆಚರಣೆ ಮಾಡುವಂತೆ ಮನವಿ ಮಾಡಿದರು.
ಉಷಾ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಧನಂಜಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.