<p><strong>ಕನಕಪುರ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ತಾಲ್ಲೂಕಿಗೆ ಭಾನುವಾರ ಭೇಟಿ ನೀಡಲಿದ್ದಾರೆ. ಬೆಳ್ಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಡುವ ಅವರು 11.20ಕ್ಕೆ ತಾಲ್ಲೂಕಿನ ಬಿಜ್ಜಹಳ್ಳಿಗೆ ಬರಲಿದ್ದಾರೆ.</p>.<p>ರಂಭಾಪುರಿ ಜಗದ್ಗುರು ಅವರ ಅಡ್ಡಪಲ್ಲಕ್ಕಿ ಮಹೋತ್ಸವ, ಇಷ್ಟಲಿಂಗ ಮಹಾಪೂಜೆ, ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಸಮಾರಂಭದಲ್ಲಿ ಅವರು ಭಾಗವಹಿಸುವರು.</p>.<p>ಮಧ್ಯಾಹ್ನ 12.30ಕ್ಕೆ ಬಿಜ್ಜಹಳ್ಳಿಯಿಂದ ನಿರ್ಗಮಿಸಿ ಮಧ್ಯಾಹ್ನ 12.45ಕ್ಕೆ ಕೋಡಿಹಳ್ಳಿಗೆ ಬರಲಿದ್ದಾರೆ.ಅಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವರು. 2.30ಕ್ಕೆ ಕೋಡಿಹಳ್ಳಿಯಿಂದ ಹೊರಟು 3 ಗಂಟೆಗೆ ಕನಕಪುರಕ್ಕೆ ಬಂದು ಅಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p>ಸಂಜೆ 6 ಗಂಟೆಗೆ ಕನಕಪುರದಿಂದ ಹೊರಟು ರಾತ್ರಿ 7 ಗಂಟೆಗೆ ಬೆಂಗಳೂರು ತಲುಪುವರು ಎಂದು ಡಿಸಿಎಂ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ತಾಲ್ಲೂಕಿಗೆ ಭಾನುವಾರ ಭೇಟಿ ನೀಡಲಿದ್ದಾರೆ. ಬೆಳ್ಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಡುವ ಅವರು 11.20ಕ್ಕೆ ತಾಲ್ಲೂಕಿನ ಬಿಜ್ಜಹಳ್ಳಿಗೆ ಬರಲಿದ್ದಾರೆ.</p>.<p>ರಂಭಾಪುರಿ ಜಗದ್ಗುರು ಅವರ ಅಡ್ಡಪಲ್ಲಕ್ಕಿ ಮಹೋತ್ಸವ, ಇಷ್ಟಲಿಂಗ ಮಹಾಪೂಜೆ, ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಸಮಾರಂಭದಲ್ಲಿ ಅವರು ಭಾಗವಹಿಸುವರು.</p>.<p>ಮಧ್ಯಾಹ್ನ 12.30ಕ್ಕೆ ಬಿಜ್ಜಹಳ್ಳಿಯಿಂದ ನಿರ್ಗಮಿಸಿ ಮಧ್ಯಾಹ್ನ 12.45ಕ್ಕೆ ಕೋಡಿಹಳ್ಳಿಗೆ ಬರಲಿದ್ದಾರೆ.ಅಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವರು. 2.30ಕ್ಕೆ ಕೋಡಿಹಳ್ಳಿಯಿಂದ ಹೊರಟು 3 ಗಂಟೆಗೆ ಕನಕಪುರಕ್ಕೆ ಬಂದು ಅಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p>ಸಂಜೆ 6 ಗಂಟೆಗೆ ಕನಕಪುರದಿಂದ ಹೊರಟು ರಾತ್ರಿ 7 ಗಂಟೆಗೆ ಬೆಂಗಳೂರು ತಲುಪುವರು ಎಂದು ಡಿಸಿಎಂ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>