<p><strong>ರಾಮನಗರ</strong>: ‘ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅವರು ಏನು ಹೇಳುತ್ತಾರೊ ಅದರಂತೆ ಪಕ್ಷ ನಡೆದುಕೊಳ್ಳುತ್ತದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷವೇ ತೀರ್ಮಾನಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.</p><p>‘ಸದ್ಯಕ್ಕೆ ಸಿ.ಎಂ ಬದಲಾವಣೆ ಇಲ್ಲ’ ಎಂಬ ಖರ್ಗೆ ಅವರ ಹೇಳಿಕೆ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮೇ 15ರಂದು ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಸುದ್ದಿ ಸಿಗುವ ಕುರಿತು ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರನ್ನೇ ಕೇಳಿ. ಅವರಿಗೆ ಮಾಹಿತಿ ಇರಬಹುದು’ ಎಂದರು.</p>.<p>‘ನಾನು ದೆಹಲಿಗೆ ಹೋಗುವುದು ಹೊಸದೇನಲ್ಲ. ಹದಿನೈದು ವರ್ಷಗಳಿಂದಲೂ ಕೆಲಸವಿದ್ದಾಗಲೆಲ್ಲಾ ಹೋಗುತ್ತಿದ್ದೇನೆ. ನನ್ನ ಭೇಟಿ ಅಪರೂಪವೇನಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p><strong>ಕೇಂದ್ರದವರನ್ನು ಕೇಳಿ</strong>: ‘ವಾಣಿಜ್ಯ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರವೇ ಉತ್ತರಿಸಬೇಕು. ರಾಜ್ಯದಲ್ಲಿರುವ ಕೇಂದ್ರದ ಪ್ರತಿನಿಧಿಗಳು ಆ ಬಗ್ಗೆ ಪ್ರತಿಕ್ರಿಯಿಸಬೇಕು. ಪಂಚ ರಾಜ್ಯಗಳ ಚುನಾವಣೆವರೆಗೆ ಸುಮ್ಮನಿದ್ದು ಈಗ ಯಾಕೆ ದರ ಏರಿಕೆ ಮಾಡಿದ್ದಾರೆ ಎಂಬುದನ್ನು ಅವರನ್ನೇ ಕೇಳಿ’ ಎಂದು ಸಿಲಿಂಡರ್ ದರ ಏರಿಕೆ ಕುರಿತ ಪ್ರಶ್ನೆಗೆ ಸುರೇಶ್ ಉತ್ತರಿಸಿದರು.</p><p>‘ಪಂಚ ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಫಲಿತಾಂಶ ಬರುವ ನಿರೀಕ್ಷೆ ಇದೆ. ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಒಕ್ಕೂಟ ಜಯ ಸಾಧಿಸಲಿದೆ. ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪ ಚುಣಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು.ಮುಖ್ಯಮಂತ್ರಿ ಬದಲಾವಣೆ ಇನ್ನೂ ತೀರ್ಮಾನವಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅವರು ಏನು ಹೇಳುತ್ತಾರೊ ಅದರಂತೆ ಪಕ್ಷ ನಡೆದುಕೊಳ್ಳುತ್ತದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷವೇ ತೀರ್ಮಾನಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.</p><p>‘ಸದ್ಯಕ್ಕೆ ಸಿ.ಎಂ ಬದಲಾವಣೆ ಇಲ್ಲ’ ಎಂಬ ಖರ್ಗೆ ಅವರ ಹೇಳಿಕೆ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮೇ 15ರಂದು ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಸುದ್ದಿ ಸಿಗುವ ಕುರಿತು ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರನ್ನೇ ಕೇಳಿ. ಅವರಿಗೆ ಮಾಹಿತಿ ಇರಬಹುದು’ ಎಂದರು.</p>.<p>‘ನಾನು ದೆಹಲಿಗೆ ಹೋಗುವುದು ಹೊಸದೇನಲ್ಲ. ಹದಿನೈದು ವರ್ಷಗಳಿಂದಲೂ ಕೆಲಸವಿದ್ದಾಗಲೆಲ್ಲಾ ಹೋಗುತ್ತಿದ್ದೇನೆ. ನನ್ನ ಭೇಟಿ ಅಪರೂಪವೇನಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p><strong>ಕೇಂದ್ರದವರನ್ನು ಕೇಳಿ</strong>: ‘ವಾಣಿಜ್ಯ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರವೇ ಉತ್ತರಿಸಬೇಕು. ರಾಜ್ಯದಲ್ಲಿರುವ ಕೇಂದ್ರದ ಪ್ರತಿನಿಧಿಗಳು ಆ ಬಗ್ಗೆ ಪ್ರತಿಕ್ರಿಯಿಸಬೇಕು. ಪಂಚ ರಾಜ್ಯಗಳ ಚುನಾವಣೆವರೆಗೆ ಸುಮ್ಮನಿದ್ದು ಈಗ ಯಾಕೆ ದರ ಏರಿಕೆ ಮಾಡಿದ್ದಾರೆ ಎಂಬುದನ್ನು ಅವರನ್ನೇ ಕೇಳಿ’ ಎಂದು ಸಿಲಿಂಡರ್ ದರ ಏರಿಕೆ ಕುರಿತ ಪ್ರಶ್ನೆಗೆ ಸುರೇಶ್ ಉತ್ತರಿಸಿದರು.</p><p>‘ಪಂಚ ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಫಲಿತಾಂಶ ಬರುವ ನಿರೀಕ್ಷೆ ಇದೆ. ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಒಕ್ಕೂಟ ಜಯ ಸಾಧಿಸಲಿದೆ. ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪ ಚುಣಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು.ಮುಖ್ಯಮಂತ್ರಿ ಬದಲಾವಣೆ ಇನ್ನೂ ತೀರ್ಮಾನವಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>