ಪ್ರಜ್ವಲ್ ಕೃತ್ಯಕ್ಕೂ ಕುಟುಂಬಕ್ಕೂ ತಮಗೂ ಸಂಬಂಧವಿಲ್ಲ ಎನ್ನುವ ಎಚ್.ಡಿ. ಕುಮಾರಸ್ವಾಮಿ ಬೇಕಾದಾಗ ಒಂದು ರೀತಿ, ಬೇಡವಾದಾಗ ಒಂದು ರೀತಿ ಮಾತನಾಡುತ್ತಾರೆ. ಪ್ರಜ್ವಲ್ ಎನ್ಡಿಎ ಅಭ್ಯರ್ಥಿಯಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಸಹ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಬೇಕು. ಮೌನವಾಗಿರುವ ಬದಲು ಅಭಿಪ್ರಾಯ ವ್ಯಕ್ತಪಡಿಸುವ ಬದ್ಧತೆ ತೋರಬೇಕು ಎಂದು ಒತ್ತಾಯಿಸಿದರು.