ಕನಕಪುರ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ತಮ್ಮ ಮನೆದೇವರಾದ ಪಟ್ಟಣದ ಕೆಂಕೇರಮ್ಮ ದೇವಾಲಯದಲ್ಲಿ ಬಿ.ಫಾರಂ ಇಟ್ಟು ಪೂಜೆ ಸಲ್ಲಿಸಿ ಆರ್ಶಿವಾದ ಪಡೆದರು.
ಈ ಸಂದರ್ಭದಲ್ಲಿ ಸುರೇಶ್ ಅವರ ತಾಯಿ ಗೌರಮ್ಮ, ಸಹೋದರಿ ಮಂಜುಳಾ, ಸಹೋದರ, ಡಿಸಿಎಂ ಡಿ.ಕೆ. ಶಿವಕುಮಾರ್, ಉಷಾ ಶಿವಕುಮಾರ್, ಐಶ್ವರ್ಯಾ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಅವರು, ಪ್ರತಿಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ಮನೆದೇವರು ಹಾಗೂ ಕಬ್ಬಾಳಮ್ಮ ದೇವರ ಮುಂದೆ ಬಿ ಫಾರಂ ಇಟ್ಟು ಪೂಜೆ ಸಲ್ಲಿಸುವುದು ವಾಡಿಕೆ.