<p><strong>ಮಾಗಡಿ:</strong> ಶಾಸಕ ಬಾಲಕೃಷ್ಣ ಅವರು ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.<br><br> ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್–ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>ಶಾಸಕ ಸಹೋದರ ಎಚ್.ಎನ್.ಅಶೋಕ್ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಒಕ್ಕಲಿಗ ಸಂಘದ ನಿರ್ದೇಶಕರಾಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ, ಹಾಲಿನ ಡೇರಿ ಅಧ್ಯಕ್ಷರಾಗಿ, ಈಗ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಇವರ ಕುಟುಂಬಕ್ಕೆ ಎಲ್ಲ ಅಧಿಕಾರ ಬೇಕಾ ಎಂದು ಪ್ರಶ್ನಿಸಿದರು. </p>.<p><strong>ಅಧಿಕಾರ ದುರುಪಯೋಗ:</strong> </p><p>ಬಮೂಲ್ನಲ್ಲಿ ಶಾಸಕ ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅಧಿಕಾರ ಹಿಡಿಯಲು ಹೊರಟಿದ್ದಾರೆ ಎಂದು ದೂರಿದರು.</p>.<p>ಬಿಜೆಪಿ ಯುವ ಮುಖಂಡ ಪ್ರಸಾದ್ ಗೌಡ ಮಾತನಾಡಿ, ಪಕ್ಷದ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡರ ಪರ ಮತಯಾಚನೆ ಮಾಡಿದರು.</p>.<p>ಜೆಡಿಎಸ್ ಮುಖಂಡರಾದ ಏಳಿಗೆಹಳ್ಳಿ ತಮ್ಮಣ್ಣಗೌಡ, ಜುಟ್ಟನಹಳ್ಳಿ ಜಯರಾಂ, ಕೆಂಪೇಗೌಡ ಬೋರ್ ವೆಲ್ ನರಸಿಂಹಯ್ಯ, ಗ್ರಾ.ಪಂ.ಸದಸ್ಯ ಗುಡೇಮಾರನಹಳ್ಳಿ ನಾಗರಾಜು, ಶಿವರಾಂ, ರಂಗಸ್ವಾಮಿ, ವೀರಭದ್ರಯ್ಯ, ಪಂಚೆ ರಾಮಣ್ಣ ಕೆಂಪಸಾಗರ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಶಾಸಕ ಬಾಲಕೃಷ್ಣ ಅವರು ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.<br><br> ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್–ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>ಶಾಸಕ ಸಹೋದರ ಎಚ್.ಎನ್.ಅಶೋಕ್ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಒಕ್ಕಲಿಗ ಸಂಘದ ನಿರ್ದೇಶಕರಾಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ, ಹಾಲಿನ ಡೇರಿ ಅಧ್ಯಕ್ಷರಾಗಿ, ಈಗ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಇವರ ಕುಟುಂಬಕ್ಕೆ ಎಲ್ಲ ಅಧಿಕಾರ ಬೇಕಾ ಎಂದು ಪ್ರಶ್ನಿಸಿದರು. </p>.<p><strong>ಅಧಿಕಾರ ದುರುಪಯೋಗ:</strong> </p><p>ಬಮೂಲ್ನಲ್ಲಿ ಶಾಸಕ ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅಧಿಕಾರ ಹಿಡಿಯಲು ಹೊರಟಿದ್ದಾರೆ ಎಂದು ದೂರಿದರು.</p>.<p>ಬಿಜೆಪಿ ಯುವ ಮುಖಂಡ ಪ್ರಸಾದ್ ಗೌಡ ಮಾತನಾಡಿ, ಪಕ್ಷದ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡರ ಪರ ಮತಯಾಚನೆ ಮಾಡಿದರು.</p>.<p>ಜೆಡಿಎಸ್ ಮುಖಂಡರಾದ ಏಳಿಗೆಹಳ್ಳಿ ತಮ್ಮಣ್ಣಗೌಡ, ಜುಟ್ಟನಹಳ್ಳಿ ಜಯರಾಂ, ಕೆಂಪೇಗೌಡ ಬೋರ್ ವೆಲ್ ನರಸಿಂಹಯ್ಯ, ಗ್ರಾ.ಪಂ.ಸದಸ್ಯ ಗುಡೇಮಾರನಹಳ್ಳಿ ನಾಗರಾಜು, ಶಿವರಾಂ, ರಂಗಸ್ವಾಮಿ, ವೀರಭದ್ರಯ್ಯ, ಪಂಚೆ ರಾಮಣ್ಣ ಕೆಂಪಸಾಗರ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>