<p><strong>ರಾಮನಗರ:</strong> ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿಯೊಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.</p><p>ನಯನ(19) ಮೃತರು. ಐದು ತಿಂಗಳ ಗರ್ಭಿಣಿಯಾಗಿದ್ದ ನಯನ ಅವರು ಒಂಬತ್ತು ತಿಂಗಳ ಹಿಂದೆಯಷ್ಟೆ ಸುನೀಲ್ ಎಂಬುವರನ್ನು ಮದುವೆಯಾಗಿದ್ದರು.</p><p>ಕೆಲ ವಾರಗಳಿಂದ ಕುಟುಂಬದಲ್ಲಿ ಕಲಹ ತಲೆದೋರಿತ್ತು. ಇದೇ ಕಾರಣಕ್ಕೆ ಬೇಸತ್ತ ನಯನ ಅವರು ಬುಧವಾರ ರಾತ್ರಿ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಕುಟುಂಬದವರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು.</p><p>ಆದರೆ, ಹೆಚ್ಚಿನ ಪ್ರಮಾಣದಲ್ಲಿ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ನಯನ ಅವರ ಕುಟುಂಬದವರು ಸುನೀಲ್ ಹಾಗೂ ಅವರ ತಂದೆ-ತಾಯಿ ವಿರುದ್ಧ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿಯೊಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.</p><p>ನಯನ(19) ಮೃತರು. ಐದು ತಿಂಗಳ ಗರ್ಭಿಣಿಯಾಗಿದ್ದ ನಯನ ಅವರು ಒಂಬತ್ತು ತಿಂಗಳ ಹಿಂದೆಯಷ್ಟೆ ಸುನೀಲ್ ಎಂಬುವರನ್ನು ಮದುವೆಯಾಗಿದ್ದರು.</p><p>ಕೆಲ ವಾರಗಳಿಂದ ಕುಟುಂಬದಲ್ಲಿ ಕಲಹ ತಲೆದೋರಿತ್ತು. ಇದೇ ಕಾರಣಕ್ಕೆ ಬೇಸತ್ತ ನಯನ ಅವರು ಬುಧವಾರ ರಾತ್ರಿ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಕುಟುಂಬದವರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು.</p><p>ಆದರೆ, ಹೆಚ್ಚಿನ ಪ್ರಮಾಣದಲ್ಲಿ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ನಯನ ಅವರ ಕುಟುಂಬದವರು ಸುನೀಲ್ ಹಾಗೂ ಅವರ ತಂದೆ-ತಾಯಿ ವಿರುದ್ಧ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>