ವಸತಿರಹಿತ ಬಡಜನರಿಗೆ ಮನೆ ನಿರ್ಮಿಸಿಕೊಡಲು ಇಲ್ಲಿ 2010ರಲ್ಲಿ ಜಮೀನನ್ನು ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಅಂದಿನ ಮಾರುಕಟ್ಟೆ ದರದಂತೆ ಪರಿಹಾರವನ್ನು ನೀಡಲಾಗಿತ್ತು. ಆದರೆ ಪರಿಹಾರ ನೀಡಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿದ ಇಬ್ಬರು ಮಹಿಳೆಯರು, ಶಂಕುಸ್ಥಾಪನೆ ಕಾರ್ಯಕ್ರಮದ ಸಂದರ್ಭ ಕೂಗಾಡುತ್ತ ಗಮನ ಸೆಳೆಯಲು ಪ್ರಯತ್ನಿಸಿದರು.