ರಾಮನಗರ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು, ಪ್ರತಿಕ್ರಿಯೆ ನೀಡಲು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ನಿರಾಕರಿಸಿದರು. ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಸ್ಟ್ರಾಂಗ್ ರೂಂಗೆ ಮಂಗಳವಾರ ಭೇಟಿ ನೀಡಿದ ನಂತರ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.