<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಬ್ಬೆದೊಡ್ಡಿ ಗ್ರಾಮದಲ್ಲಿ ಗಬ್ಬೆದ್ದು ನಾರುತ್ತಿದ್ದ ಚರಂಡಿಗಳನ್ನು ಗ್ರಾಮಸ್ಥರೇ ತಮ್ಮ ಸ್ವಂತ ಹಣದಲ್ಲಿ ಸ್ವಚ್ಛ ಮಾಡಿಸಿಕೊಂಡರು. </p>.<p>ತಮ್ಮ ಗ್ರಾಮದಲ್ಲಿ ಚರಂಡಿಗಳಲ್ಲಿ ಕಸ, ಕಡ್ಡಿ ನಿಂತುಕೊಂಡಿದ್ದು, ಕೊಳಚೆ ನೀರು ಸರಾಗವಾಗಿ ಹರಿಯದೆ ಚರಂಡಿ ಗಬ್ಬು ನಾರುತ್ತಿದೆ. ಈ ಚರಂಡಿಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದಾಗಿ ಗ್ರಾಮಸ್ಥರೇ ಹಣ ಸಂಗ್ರಹಿಸಿ, ಚರಂಡಿಯನ್ನು ಶುಚಿ ಮಾಡಿಕೊಂಡಿದ್ದೇವೆ ಎಂದು ಗ್ರಾಮಸ್ಥರು ಹೇಳಿದರು. </p>.<p>ಗ್ರಾಮಸ್ಥರಾದ ವೀಣಾ ಮಾತನಾಡಿ, ಕೆಬ್ಬೆದೊಡ್ಡಿ ಗ್ರಾಮಸ್ಥರು ಹಲವು ವರ್ಷಗಳಿಂದ ಚರಂಡಿಯಲ್ಲಿ ನೀರು ಹರಿಯದೆ ಗಬ್ಬು ನಾರುತ್ತಿವೆ. ಚರಂಡಿಗಳು ತುಂಬಿಕೊಂಡು ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಒಂದು ನಲ್ಲಿಗೆ ತಲಾ ₹8,000 ತೆರಿಗೆ ಹಾಕಿದ್ದಾರೆ. ಆದರೆ, ಹಣವನ್ನು ಮಾತ್ರ ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ವಿನಿಯೋಗಿಸುತ್ತಿಲ್ಲ ಎಂದು ದೂರಿದರು. </p>.<p>ಇದೇ ವೇಳೆ ಗ್ರಾಮಸ್ಥರಾದ ಉದಯ್, ಮಂಜುಳಾ, ವೀಣಾ, ಬೇಬಿ, ಪುಟ್ಟಲಕ್ಷ್ಮಮ್ಮ, ಕಾಳಪ್ಪ, ಮರಿಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಬ್ಬೆದೊಡ್ಡಿ ಗ್ರಾಮದಲ್ಲಿ ಗಬ್ಬೆದ್ದು ನಾರುತ್ತಿದ್ದ ಚರಂಡಿಗಳನ್ನು ಗ್ರಾಮಸ್ಥರೇ ತಮ್ಮ ಸ್ವಂತ ಹಣದಲ್ಲಿ ಸ್ವಚ್ಛ ಮಾಡಿಸಿಕೊಂಡರು. </p>.<p>ತಮ್ಮ ಗ್ರಾಮದಲ್ಲಿ ಚರಂಡಿಗಳಲ್ಲಿ ಕಸ, ಕಡ್ಡಿ ನಿಂತುಕೊಂಡಿದ್ದು, ಕೊಳಚೆ ನೀರು ಸರಾಗವಾಗಿ ಹರಿಯದೆ ಚರಂಡಿ ಗಬ್ಬು ನಾರುತ್ತಿದೆ. ಈ ಚರಂಡಿಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದಾಗಿ ಗ್ರಾಮಸ್ಥರೇ ಹಣ ಸಂಗ್ರಹಿಸಿ, ಚರಂಡಿಯನ್ನು ಶುಚಿ ಮಾಡಿಕೊಂಡಿದ್ದೇವೆ ಎಂದು ಗ್ರಾಮಸ್ಥರು ಹೇಳಿದರು. </p>.<p>ಗ್ರಾಮಸ್ಥರಾದ ವೀಣಾ ಮಾತನಾಡಿ, ಕೆಬ್ಬೆದೊಡ್ಡಿ ಗ್ರಾಮಸ್ಥರು ಹಲವು ವರ್ಷಗಳಿಂದ ಚರಂಡಿಯಲ್ಲಿ ನೀರು ಹರಿಯದೆ ಗಬ್ಬು ನಾರುತ್ತಿವೆ. ಚರಂಡಿಗಳು ತುಂಬಿಕೊಂಡು ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಒಂದು ನಲ್ಲಿಗೆ ತಲಾ ₹8,000 ತೆರಿಗೆ ಹಾಕಿದ್ದಾರೆ. ಆದರೆ, ಹಣವನ್ನು ಮಾತ್ರ ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ವಿನಿಯೋಗಿಸುತ್ತಿಲ್ಲ ಎಂದು ದೂರಿದರು. </p>.<p>ಇದೇ ವೇಳೆ ಗ್ರಾಮಸ್ಥರಾದ ಉದಯ್, ಮಂಜುಳಾ, ವೀಣಾ, ಬೇಬಿ, ಪುಟ್ಟಲಕ್ಷ್ಮಮ್ಮ, ಕಾಳಪ್ಪ, ಮರಿಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>