ಮತ್ತೊಬ್ಬ ರಂಗಭೂಮಿ ಕಲಾವಿದ ಮಂಗಳವಾರಪೇಟೆಯ ನಾರಾಯಣ್ ಮಾತನಾಡಿ, ಎಲೆಮರೆ ಕಾಯಿಯಂತೆ ಇರುವ ರಂಗಭೂಮಿ ಪ್ರತಿಭೆಗಳಿಗೆ ಬೆಳಕು ನೀಡುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಸಹಕಾರಿಯಾಗಿದೆ. ಪ್ರಸಕ್ತ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯತ್ತ ಒಲವು ತೋರುವ ಮಂದಿ ಹೆಚ್ಚಾಗುತ್ತಿದ್ದಾರೆ. ಅಂತಹ ಮಂದಿಗೆ ನಾಡು, ನುಡಿ, ಸಂಸ್ಕೃತಿ ಹಾಗೂ ಪೌರಾಣಿಕ ನಾಟಕಗಳ ಬಗ್ಗೆ ಒಲವು ಬೆಳೆಸಬೇಕಾದ ಅವಶ್ಯಕತೆ ಇದೆ ಎಂದರು.