<p><strong>ಕನಕಪುರ</strong>: ಒಂದು ಕಡೆ ಕಾಂಕ್ರೀಟ್ ರಸ್ತೆ ಕಾಮಗಾರಿ, ಮತ್ತೊಂದೆಡೆ ನೀರಿನ ಪೈಪ್ ಅಳವಡಿಕೆ ಕಾಮಗಾರಿ. ಸುತ್ತಲೂ ಹರಡಿದ ಧೂಳು ಅಕ್ಷರಶಃ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸಾರ್ವಜನಿಕರು ಹಲವು ದಿನಗಳಿಂದ ನಿತ್ಯ ಧೂಳಿನ ಸ್ನಾನ ಮಾಡುತ್ತಿದ್ದಾರೆ. </p>.<p>ನಗರದ ಹೌಸಿಂಗ್ ಬೋರ್ಡ್ ಶಿವನಹಳ್ಳಿ ಬೈಪಾಸ್ನಿಂದ ಬೆಂಗಳೂರು ರಸ್ತೆಯ ತುಂಗಣಿವರೆಗೂ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ಜೊತೆಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ನೈರ್ಮಲೀಕರಣ ಮಂಡಳಿ (ಕೆಯುಡಬ್ಲ್ಯೂಎಸ್ಎಸ್ಬಿ) ನಗರದಲ್ಲಿ ನೀರಿನ ಪೈಪ್ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.</p>.<p>ಈ ಎರಡೂ ಕಾಮಗಾರಿ ಏಕಕಾಲಕ್ಕೆ ನಡೆಯುತ್ತಿರುವುದರಿಂದ ಜನರ ಓಡಾಟಕ್ಕೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ತಿರಗಲು ಜನರು ಪರದಾಡುತ್ತಿದ್ದಾರೆ.</p>.<p>ಮತ್ತೊಂದೆಡೆ ಪೈಪ್ಲೈನ್ ಅಳವಡಿಸಲು ನೆಲ ಅಗೆಯುತ್ತಿರುವುದರಿಂದ ಇಡೀ ವಾತಾವರಣ ಧೂಳಿನಿಂದ ತುಂಬಿದೆ. ಜನರು ಉಸಿರಾಟಕ್ಕೆ ತೊಂದರೆ ಪಡುತ್ತಿದ್ದಾರೆ. </p>.<p>ಪೈಪ್ಲೈನ್ ಅಳವಡಿಕೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮತ್ತು ಯೋಜನಾ ಬದ್ಧವಾಗಿ ಮಾಡಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಮಂದಗತಿ ಮತ್ತು ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ಇಷ್ಟೆಲ್ಲ ಸಮಸ್ಯೆಗಳಾಗುತ್ತಿವೆ. ಕಾಮಗಾರಿ ನಡೆಯುತ್ತಿರುವ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಂಗಡಿಗಳ ವ್ಯಾಪಾರ ಕುಸಿದಿದೆ. </p>.<p>ನಗರಸಭೆ, ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳಾಗಲಿ ಈ ಸಮಸ್ಯೆ ಕಂಡು ಕಾಣದಂತೆ ಇದ್ದಾರೆ. ಪರಿಹಾರದ ಬಗ್ಗೆ ಅವರು ಯೋಚಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಮಗಾರಿ ಮಾಡುವಾಗ ಧೂಳು ಏಳದಂತೆ ಪ್ರತಿದಿನ ರಸ್ತೆಗಳಿಗೆ ನೀರು ಸಿಂಪಡಿಸಬೇಕು. ಕಾಮಗಾರಿ ನಡೆಯುವ ರಸ್ತೆಯಲ್ಲಿರುವ ಅಂಗಡಿ ಮುಂಭಾಗದ ವಾಹನ, ದ್ವಿಚಕ್ರ ವಾಹನ ನಿಲುಗಡೆ ಮಾಡದಂತೆ ಪೊಲೀಸರು ನಿಗಾ ವಹಿಸಬೇಕಿದೆ. ಆದರೆ, ಇದ್ಯಾವುದೂ ಆಗುತ್ತಿಲ್ಲ! ನಿತ್ಯ ಜನರಿಗೆ ಧೂಳಿನ ಸ್ನಾನ ತಪ್ಪುತ್ತಿಲ್ಲ.</p>.<p>ಪೈಪ್ಲೈನ್ ಕಾಮಗಾರಿ ಮಾಡುತ್ತಿರುವ ಕೆಯುಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳ ಅಭಿಪ್ರಾಯ ಕೇಳಲು ಸಂಪರ್ಕಿಸಲು ಪ್ರಯತ್ನಿಸಿದಾಗ ದೂರವಾಣಿ ಸ್ವೀಕರಿಸಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಒಂದು ಕಡೆ ಕಾಂಕ್ರೀಟ್ ರಸ್ತೆ ಕಾಮಗಾರಿ, ಮತ್ತೊಂದೆಡೆ ನೀರಿನ ಪೈಪ್ ಅಳವಡಿಕೆ ಕಾಮಗಾರಿ. ಸುತ್ತಲೂ ಹರಡಿದ ಧೂಳು ಅಕ್ಷರಶಃ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸಾರ್ವಜನಿಕರು ಹಲವು ದಿನಗಳಿಂದ ನಿತ್ಯ ಧೂಳಿನ ಸ್ನಾನ ಮಾಡುತ್ತಿದ್ದಾರೆ. </p>.<p>ನಗರದ ಹೌಸಿಂಗ್ ಬೋರ್ಡ್ ಶಿವನಹಳ್ಳಿ ಬೈಪಾಸ್ನಿಂದ ಬೆಂಗಳೂರು ರಸ್ತೆಯ ತುಂಗಣಿವರೆಗೂ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ಜೊತೆಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ನೈರ್ಮಲೀಕರಣ ಮಂಡಳಿ (ಕೆಯುಡಬ್ಲ್ಯೂಎಸ್ಎಸ್ಬಿ) ನಗರದಲ್ಲಿ ನೀರಿನ ಪೈಪ್ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.</p>.<p>ಈ ಎರಡೂ ಕಾಮಗಾರಿ ಏಕಕಾಲಕ್ಕೆ ನಡೆಯುತ್ತಿರುವುದರಿಂದ ಜನರ ಓಡಾಟಕ್ಕೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ತಿರಗಲು ಜನರು ಪರದಾಡುತ್ತಿದ್ದಾರೆ.</p>.<p>ಮತ್ತೊಂದೆಡೆ ಪೈಪ್ಲೈನ್ ಅಳವಡಿಸಲು ನೆಲ ಅಗೆಯುತ್ತಿರುವುದರಿಂದ ಇಡೀ ವಾತಾವರಣ ಧೂಳಿನಿಂದ ತುಂಬಿದೆ. ಜನರು ಉಸಿರಾಟಕ್ಕೆ ತೊಂದರೆ ಪಡುತ್ತಿದ್ದಾರೆ. </p>.<p>ಪೈಪ್ಲೈನ್ ಅಳವಡಿಕೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮತ್ತು ಯೋಜನಾ ಬದ್ಧವಾಗಿ ಮಾಡಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಮಂದಗತಿ ಮತ್ತು ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ಇಷ್ಟೆಲ್ಲ ಸಮಸ್ಯೆಗಳಾಗುತ್ತಿವೆ. ಕಾಮಗಾರಿ ನಡೆಯುತ್ತಿರುವ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಂಗಡಿಗಳ ವ್ಯಾಪಾರ ಕುಸಿದಿದೆ. </p>.<p>ನಗರಸಭೆ, ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳಾಗಲಿ ಈ ಸಮಸ್ಯೆ ಕಂಡು ಕಾಣದಂತೆ ಇದ್ದಾರೆ. ಪರಿಹಾರದ ಬಗ್ಗೆ ಅವರು ಯೋಚಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಕಾಮಗಾರಿ ಮಾಡುವಾಗ ಧೂಳು ಏಳದಂತೆ ಪ್ರತಿದಿನ ರಸ್ತೆಗಳಿಗೆ ನೀರು ಸಿಂಪಡಿಸಬೇಕು. ಕಾಮಗಾರಿ ನಡೆಯುವ ರಸ್ತೆಯಲ್ಲಿರುವ ಅಂಗಡಿ ಮುಂಭಾಗದ ವಾಹನ, ದ್ವಿಚಕ್ರ ವಾಹನ ನಿಲುಗಡೆ ಮಾಡದಂತೆ ಪೊಲೀಸರು ನಿಗಾ ವಹಿಸಬೇಕಿದೆ. ಆದರೆ, ಇದ್ಯಾವುದೂ ಆಗುತ್ತಿಲ್ಲ! ನಿತ್ಯ ಜನರಿಗೆ ಧೂಳಿನ ಸ್ನಾನ ತಪ್ಪುತ್ತಿಲ್ಲ.</p>.<p>ಪೈಪ್ಲೈನ್ ಕಾಮಗಾರಿ ಮಾಡುತ್ತಿರುವ ಕೆಯುಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳ ಅಭಿಪ್ರಾಯ ಕೇಳಲು ಸಂಪರ್ಕಿಸಲು ಪ್ರಯತ್ನಿಸಿದಾಗ ದೂರವಾಣಿ ಸ್ವೀಕರಿಸಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>