<p><strong>ರಾಮನಗರ</strong>: ನಗರಸಭೆ ಕೈಗೊಂಡಿರುವ ‘ಮನೆ ಮನೆಗೆ ಇ-ಖಾತೆ' ಅಭಿಯಾನದಡಿ ಇದುವರೆಗೆ 8 ಸಾವಿರ ಇ-ಖಾತೆಗಳನ್ನು ಸೃಷ್ಟಿಸಿ ವಿತರಣೆ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕೆ.ಶೇಷಾದ್ರಿ ಶಶಿ ತಿಳಿಸಿದರು.</p><p>ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಅರ್ಜಿದಾರರಿಗೆ ಇ-ಖಾತೆ ವಿತರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಆಗಾಗ ತಲೆದೋರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳ ನಡುವೆಯೂ ಈ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಿವಾರಿಸುವಂತೆ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ’ ಎಂದರು.</p><p>ನಗರದಲ್ಲಿ ಎಲ್ಲೆಡೆ ಕಸ ಎಸೆಯದಂತೆ ನಿತ್ಯ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾವಂತರೇ ತ್ಯಾಜ್ಯವನ್ನು ರಸ್ತೆಬದಿ ಸೇರಿದಂತೆ ಎಲ್ಲೆಡೆ ಎಸೆಯುತ್ತಿದ್ದಾರೆ. ಎಲ್ಲರೂ ತ್ಯಾಜ್ಯವನ್ನು ನಗರಸಭೆ ಕಸ ಸಂಗ್ರಹ ವಾಹನಗಳಿಗೆ ನೀಡಬೇಕು ಎಂದರು. </p><p>ನಗರಸಭೆ ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಯಾವುದೇ ಪಕ್ಷ, ಸಂಘಟನೆಯಾಗಲಿ ಅನುಮತಿ ಪಡೆಯುವುದು ಕಡ್ಡಾಯ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p> <p>ಪೌರಾಯುಕ್ತ ಡಾ.ಜಯಣ್ಣ, ಉಪಾಧ್ಯಕ್ಷೆ ಆಯಿಷಾ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪೈರೋಜ್ ಪಾಷಾ, ಸದಸ್ಯರಾದ ವಿಜಯಕುಮಾರಿ, ಸೋಮಶೇಖರ್ ಮಣಿ, ಅಜ್ಮತ್, ಗಿರಿಜಮ್ಮ, ನಾಗಮ್ಮ ಇತರರು ಉಪಸ್ಥಿತರಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನಗರಸಭೆ ಕೈಗೊಂಡಿರುವ ‘ಮನೆ ಮನೆಗೆ ಇ-ಖಾತೆ' ಅಭಿಯಾನದಡಿ ಇದುವರೆಗೆ 8 ಸಾವಿರ ಇ-ಖಾತೆಗಳನ್ನು ಸೃಷ್ಟಿಸಿ ವಿತರಣೆ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕೆ.ಶೇಷಾದ್ರಿ ಶಶಿ ತಿಳಿಸಿದರು.</p><p>ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಅರ್ಜಿದಾರರಿಗೆ ಇ-ಖಾತೆ ವಿತರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಆಗಾಗ ತಲೆದೋರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳ ನಡುವೆಯೂ ಈ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಿವಾರಿಸುವಂತೆ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ’ ಎಂದರು.</p><p>ನಗರದಲ್ಲಿ ಎಲ್ಲೆಡೆ ಕಸ ಎಸೆಯದಂತೆ ನಿತ್ಯ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾವಂತರೇ ತ್ಯಾಜ್ಯವನ್ನು ರಸ್ತೆಬದಿ ಸೇರಿದಂತೆ ಎಲ್ಲೆಡೆ ಎಸೆಯುತ್ತಿದ್ದಾರೆ. ಎಲ್ಲರೂ ತ್ಯಾಜ್ಯವನ್ನು ನಗರಸಭೆ ಕಸ ಸಂಗ್ರಹ ವಾಹನಗಳಿಗೆ ನೀಡಬೇಕು ಎಂದರು. </p><p>ನಗರಸಭೆ ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಯಾವುದೇ ಪಕ್ಷ, ಸಂಘಟನೆಯಾಗಲಿ ಅನುಮತಿ ಪಡೆಯುವುದು ಕಡ್ಡಾಯ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p> <p>ಪೌರಾಯುಕ್ತ ಡಾ.ಜಯಣ್ಣ, ಉಪಾಧ್ಯಕ್ಷೆ ಆಯಿಷಾ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪೈರೋಜ್ ಪಾಷಾ, ಸದಸ್ಯರಾದ ವಿಜಯಕುಮಾರಿ, ಸೋಮಶೇಖರ್ ಮಣಿ, ಅಜ್ಮತ್, ಗಿರಿಜಮ್ಮ, ನಾಗಮ್ಮ ಇತರರು ಉಪಸ್ಥಿತರಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>