<p><strong>ಕುದೂರು</strong>: ಶಿಕ್ಷಕ ವೃತ್ತಿಯಂತಹ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ. ಅವರಿಂದಲೇ ಸಮಾಜದ ಸಮೃದ್ಧಿ ಹಾಗೂ ಸುಧಾರಣೆ ಸಾಧ್ಯ ಎಂದು ಇಸಿಒ ಗಂಗಾಧರ್ ತಿಳಿಸಿದರು.</p>.<p>ಸೋಲೂರು ಕಂಬದಕಲ್ಲು ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಲಾಗಿದ್ದ ಸೋಲೂರು ಹೋಬಳಿಯ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ಅಧಿಕಾರಿ ಉಮೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ಎಸ್. ರಾಧಾಕೃಷ್ಣನ್ ಮತ್ತು ಸಾವಿತ್ರಿ ಬಾಫುಲೆ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೇವಾದಳ ಸಮಿತಿ ಅಧ್ಯಕ್ಷ ಆರ್.ಎಸ್ ಬಸವರಾಜು, ಸಿ.ಆರ್.ಪಿ ಕನ್ಯಾಕುಮಾರಿ, ಶಿಕ್ಷಕ ಮಲ್ಲೂರು ಲೋಕೇಶ್, ನರಸಿಂಹಮೂರ್ತಿ, ಕಾಂತರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಶಿಕ್ಷಕ ವೃತ್ತಿಯಂತಹ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ. ಅವರಿಂದಲೇ ಸಮಾಜದ ಸಮೃದ್ಧಿ ಹಾಗೂ ಸುಧಾರಣೆ ಸಾಧ್ಯ ಎಂದು ಇಸಿಒ ಗಂಗಾಧರ್ ತಿಳಿಸಿದರು.</p>.<p>ಸೋಲೂರು ಕಂಬದಕಲ್ಲು ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಲಾಗಿದ್ದ ಸೋಲೂರು ಹೋಬಳಿಯ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ಅಧಿಕಾರಿ ಉಮೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ಎಸ್. ರಾಧಾಕೃಷ್ಣನ್ ಮತ್ತು ಸಾವಿತ್ರಿ ಬಾಫುಲೆ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೇವಾದಳ ಸಮಿತಿ ಅಧ್ಯಕ್ಷ ಆರ್.ಎಸ್ ಬಸವರಾಜು, ಸಿ.ಆರ್.ಪಿ ಕನ್ಯಾಕುಮಾರಿ, ಶಿಕ್ಷಕ ಮಲ್ಲೂರು ಲೋಕೇಶ್, ನರಸಿಂಹಮೂರ್ತಿ, ಕಾಂತರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>