ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಜಿಲ್ಲೆಯಲ್ಲಿ ಶ್ರದ್ಧಾಭಕ್ತಿಯ ಈದ್ ಮಿಲಾದ್

Published 29 ಸೆಪ್ಟೆಂಬರ್ 2023, 6:52 IST
Last Updated 29 ಸೆಪ್ಟೆಂಬರ್ 2023, 6:52 IST
ಅಕ್ಷರ ಗಾತ್ರ

ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಲ್ಲಿ ಗುರುವಾರ ಈದ್‌ ಮಿಲಾದ್ ಹಬ್ಬವನ್ನು ಮುಸ್ಲಿಮರು ಶ್ರದ್ಧಾಭಕ್ತಿ ಹಾಗೂ ಸಡಗರಿಂದ ಆಚರಿಸಿದರು. ಮೆರವಣಿಗೆ ಮಾಡಿ ಗಮನ ಸೆಳೆದರು. ಧರ್ಮಗುರುಗಳು ಸಂದೇಶ ನೀಡಿದರು.

ಚಿಣ್ಣರಾದಿಯಾಗಿ ಎಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ, ಮಧ್ಯಾಹ್ನ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಸೀದಿ ಮತ್ತು ದರ್ಗಾ ಬಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಬ್ಬದ ಪ್ರಯುಕ್ತ ನಗರದ ಮಸೀದಿ ಹಾಗೂ ದರ್ಗಾಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಲ್ಲಲ್ಲಿ ಹಬ್ಬದ ಶುಭಾಶಯದ ಪ್ಲೆಕ್ಸ್‌ಗಳು ಸಹ ಕಂಡುಬಂದವು.

ಹಬ್ಬದ ಅಂಗವಾಗಿ ನಗರದ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ನಗರದ ಜಾಮಿಯಾ ಮಸೀದಿಯಿಂದ ಆರಂಭಗೊಂಡ ಮೆರವಣಿಗೆ ನಾಲಬಂದವಾಡಿ, ಮೋತಿನಗರ, ಮೊಹಬೂಬ್ ನಗರ, ಟಿಪ್ಪು ನಗರ ಮಾರ್ಗವಾಗಿ ವಾಟರ್ ಟ್ಯಾಂಕ್ ವೃತ್ತ ತಲುಪಿ, ಶೆಟ್ಟಿಹಳ್ಳಿ ರಸ್ತೆ ಮೂಲಕ ಮಸೀದಿವರೆಗೆ ತೆರಳಿತು.

ಮೆರವಣಿಗೆಯುದ್ದಕ್ಕೂ ಘೋಷಣೆಗಳು ಮೊಳಗಿದವು. ಯುವಜನರು ಧ್ವಜಗಳನ್ನು ಹಿಡಿದು ಸಾಗಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಸ್ಥಳೀಯ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಕುಡಿಯುವ ನೀರು ಒದಗಿಸಿದರು. ಜನರು ರಸ್ತೆಯ ಅಕ್ಕಪಕ್ಕ ನಿಂತು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ನೂರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ, ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು. ಆಯಕಟ್ಟಿನ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ಹಾಗೂ ಡಿಆರ್ ತುಕುಡಿಗಳನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT