<p><strong>ಕನಕಪುರ</strong>: ವಿದ್ಯುತ್ ಬಳಕೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಜಾಗೃತಿ ವಹಿಸಬೇಕು ಎಂದು ಬೆಸ್ಕಾಂ ಇಇ ಎನ್.ಶಿವಕುಮಾರ್ ಮನವಿ ಮಾಡಿದರು.</p>.<p>ಇಲ್ಲಿನ ನಗರಸಭೆ ಮುಂಭಾಗ ಬೆಸ್ಕಾಂ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ವಿದ್ಯುತ್ ಸುರಕ್ಷತಾ ಜಾಗೃತಿ ಜಾಥಾ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವಿದ್ಯುತ್ ಸುರಕ್ಷತೆಗಾಗಿ ಇಲಾಖೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಹಾಗೂ ಜಾಗೃತಿ ನಿಯಮಗಳನ್ನು ಜಾರಿಮಾಡಿದೆ. ಸಾರ್ವಜನಿಕವಾಗಿ ಸಾಕಷ್ಟು ವಿದ್ಯುತ್ ಅವಘಡ, ಅಪಘಾತ ಸಂಭವಿಸುತ್ತಿವೆ. ಅವುಗಳನ್ನು ತಡೆಗಟ್ಟುವ ಉದ್ದೇಶದಿಂದಲೇ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವುದಾಗಿ ತಿಳಿಸಿದರು.</p>.<p>ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಬಳಕೆಯಲ್ಲಿ ಎಚ್ಚರವಹಿಸಬೇಕು. ಕಾನೂನು ಬಾಹಿರವಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯಬಾರದು. ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದರೆ ಅದನ್ನು ಇಲಾಖೆ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.</p>.<p>ಬೆಸ್ಕಾಂ ಇಲಾಖೆಯಿಂದ ಆಯೋಜಿಸಿದ್ದ ಬೀದಿನಾಟಕದ ತಂಡವು ಕನಕಪುರ ಚನ್ನಬಸಪ್ಪ ವೃತ್ತ ಮತ್ತು ಕೋಡಿಹಳ್ಳಿ ಶಾರದ ಶಾಲೆ ಆವರಣದಲ್ಲಿ ವಿದ್ಯುತ್ ಜಾಗೃತಿ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.</p>.<p>ಬೆಸ್ಕಾಂ ಇಲಾಖೆ ಅಧಿಕಾರಿಗಳು, ನೌಕರರು, ಸಿಬ್ಬಂದಿ ನಗರದಲ್ಲಿ ಜಾಗೃತಿ ಜಾಥದ ಮೆರವಣಿಗೆ ನಡೆಸಿ ವಿದ್ಯುತ್ ಸುರಕ್ಷತೆ ಘೋಷಣೆ ಕೂಗುತ್ತಾ ಜನರ ಗಮನ ಸೆಳೆದರು. ಬೆಸ್ಕಾಂ ಎಇಇ ಅನಿಲ್ಕುಮಾರ್, ರಂಗಸ್ವಾಮಿ, ಮಾದೇಶ್ ಸೇರಿದಂತೆ ಎಲ್ಲ ಎಇ, ಜೆಇ ಹಾಗೂ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ವಿದ್ಯುತ್ ಬಳಕೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಜಾಗೃತಿ ವಹಿಸಬೇಕು ಎಂದು ಬೆಸ್ಕಾಂ ಇಇ ಎನ್.ಶಿವಕುಮಾರ್ ಮನವಿ ಮಾಡಿದರು.</p>.<p>ಇಲ್ಲಿನ ನಗರಸಭೆ ಮುಂಭಾಗ ಬೆಸ್ಕಾಂ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ವಿದ್ಯುತ್ ಸುರಕ್ಷತಾ ಜಾಗೃತಿ ಜಾಥಾ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವಿದ್ಯುತ್ ಸುರಕ್ಷತೆಗಾಗಿ ಇಲಾಖೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಹಾಗೂ ಜಾಗೃತಿ ನಿಯಮಗಳನ್ನು ಜಾರಿಮಾಡಿದೆ. ಸಾರ್ವಜನಿಕವಾಗಿ ಸಾಕಷ್ಟು ವಿದ್ಯುತ್ ಅವಘಡ, ಅಪಘಾತ ಸಂಭವಿಸುತ್ತಿವೆ. ಅವುಗಳನ್ನು ತಡೆಗಟ್ಟುವ ಉದ್ದೇಶದಿಂದಲೇ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವುದಾಗಿ ತಿಳಿಸಿದರು.</p>.<p>ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಬಳಕೆಯಲ್ಲಿ ಎಚ್ಚರವಹಿಸಬೇಕು. ಕಾನೂನು ಬಾಹಿರವಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯಬಾರದು. ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದರೆ ಅದನ್ನು ಇಲಾಖೆ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.</p>.<p>ಬೆಸ್ಕಾಂ ಇಲಾಖೆಯಿಂದ ಆಯೋಜಿಸಿದ್ದ ಬೀದಿನಾಟಕದ ತಂಡವು ಕನಕಪುರ ಚನ್ನಬಸಪ್ಪ ವೃತ್ತ ಮತ್ತು ಕೋಡಿಹಳ್ಳಿ ಶಾರದ ಶಾಲೆ ಆವರಣದಲ್ಲಿ ವಿದ್ಯುತ್ ಜಾಗೃತಿ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.</p>.<p>ಬೆಸ್ಕಾಂ ಇಲಾಖೆ ಅಧಿಕಾರಿಗಳು, ನೌಕರರು, ಸಿಬ್ಬಂದಿ ನಗರದಲ್ಲಿ ಜಾಗೃತಿ ಜಾಥದ ಮೆರವಣಿಗೆ ನಡೆಸಿ ವಿದ್ಯುತ್ ಸುರಕ್ಷತೆ ಘೋಷಣೆ ಕೂಗುತ್ತಾ ಜನರ ಗಮನ ಸೆಳೆದರು. ಬೆಸ್ಕಾಂ ಎಇಇ ಅನಿಲ್ಕುಮಾರ್, ರಂಗಸ್ವಾಮಿ, ಮಾದೇಶ್ ಸೇರಿದಂತೆ ಎಲ್ಲ ಎಇ, ಜೆಇ ಹಾಗೂ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>