<p><strong>ಕನಕಪುರ:</strong> ತಾಲ್ಲೂಕಿನ ಕಬ್ಬಾಳು ಮತ್ತು ಅಚ್ಚಲು ಅರಣ್ಯ ಪ್ರದೇಶ ವ್ಯಾಪ್ತಿಯ ಅಚ್ಚಲು, ಬೊಮ್ಮನಹಳ್ಳಿ, ಯಲವಳ್ಳಿ ಗ್ರಾಮಗಳಲ್ಲಿ ಕಾಡಾನೆ ಹಿಂಡು ದಾಳಿ ನಡೆಸಿ ಮಾವಿನ ಮರ ಮತ್ತು ರಾಗಿ ಬೆಳೆ ನಾಶ ಮಾಡಿದೆ.</p>.<p>ಅಚ್ಚಲು ಗ್ರಾಮದ ಪಾರ್ಥ.ಜಿ.ಗೌಡ ಎಂಬುವರಿಗೆ ಸೇರಿದ ಸುಮಾರು 20 ಮಾವಿನ ಮರಗಳನ್ನು ಕಾಡಾನೆಗಳು ನಾಶಗೊಳಿಸಿವೆ. ಬೊಮ್ಮನಹಳ್ಳಿ ಗ್ರಾಮದ ಶಿವಣ್ಣ ಮತ್ತು ರಾಮಣ್ಣ ಎಂಬುವರ ರಾಗಿ ಫಸಲನ್ನು ತಿಂದುಹಾಕಿವೆ. ಎಲವಳ್ಳಿ ಗ್ರಾಮದಲ್ಲಿ ಹಲಸಿನ ಮರ, ಬಾಳೆಗಿಡಗಳನ್ನು ನಾಶ ಮಾಡಿವೆ.</p>.<p>ಕಬ್ಬಾಳು ಮತ್ತು ಅಚ್ಚಲು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ಸುತ್ತಮುತ್ತಲ ಪ್ರದೇಶಗಳಲ್ಲಿ ನಿರಂತರ ದಾಳಿ ನಡೆಸಿ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>‘ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳು ಜಮೀನುಗಳಿಗೆ ನುಗ್ಗಿ ದಾಳಿ ಮಾಡಿದಾಗ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಾರೆ.ಆದರೆ, ಆನೆಗಳು ಕಾಡಿನೊಳಗೆ ಹೋದರು ರಾತ್ರಿ ವೇಳೆ ಮತ್ತೆ ಜಮೀನುಗಳಿಗೆ ನುಗ್ಗುತ್ತಿವೆ’ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.</p>.<p>ಕಾಡಾನೆಗಳು ನಾಡಿನತ್ತ ಬರದಂತೆ ಶಾಶ್ವತವಾಗಿ ತಡೆಗಟ್ಟಬೇಕು. ಫಸಲು ನಿರಂತರ ನಾಶವಾಗುತ್ತಿದೆ. ಕಷ್ಟಪಟ್ಟು ಬೆಳೆದರೂ ಬೆಳೆ ಕೈಗೆ ಗಿಟ್ಟುತ್ತಿಲ್ಲ. ಈ ಭಾಗದಲ್ಲಿ ರೈತರು ಬೇಸಾಯ ಮಾಡುವುದೇ ದುಸ್ತರವಾಗಿದೆ ಎಂದು ರೈತ ಪಾರ್ಥ ಜಿ.ಗೌಡ ಹೇಳಿದರು.</p>.<p>ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರಕ್ಕಾಗಿ ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಿರುವುದಾಗಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಕಬ್ಬಾಳು ಮತ್ತು ಅಚ್ಚಲು ಅರಣ್ಯ ಪ್ರದೇಶ ವ್ಯಾಪ್ತಿಯ ಅಚ್ಚಲು, ಬೊಮ್ಮನಹಳ್ಳಿ, ಯಲವಳ್ಳಿ ಗ್ರಾಮಗಳಲ್ಲಿ ಕಾಡಾನೆ ಹಿಂಡು ದಾಳಿ ನಡೆಸಿ ಮಾವಿನ ಮರ ಮತ್ತು ರಾಗಿ ಬೆಳೆ ನಾಶ ಮಾಡಿದೆ.</p>.<p>ಅಚ್ಚಲು ಗ್ರಾಮದ ಪಾರ್ಥ.ಜಿ.ಗೌಡ ಎಂಬುವರಿಗೆ ಸೇರಿದ ಸುಮಾರು 20 ಮಾವಿನ ಮರಗಳನ್ನು ಕಾಡಾನೆಗಳು ನಾಶಗೊಳಿಸಿವೆ. ಬೊಮ್ಮನಹಳ್ಳಿ ಗ್ರಾಮದ ಶಿವಣ್ಣ ಮತ್ತು ರಾಮಣ್ಣ ಎಂಬುವರ ರಾಗಿ ಫಸಲನ್ನು ತಿಂದುಹಾಕಿವೆ. ಎಲವಳ್ಳಿ ಗ್ರಾಮದಲ್ಲಿ ಹಲಸಿನ ಮರ, ಬಾಳೆಗಿಡಗಳನ್ನು ನಾಶ ಮಾಡಿವೆ.</p>.<p>ಕಬ್ಬಾಳು ಮತ್ತು ಅಚ್ಚಲು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ಸುತ್ತಮುತ್ತಲ ಪ್ರದೇಶಗಳಲ್ಲಿ ನಿರಂತರ ದಾಳಿ ನಡೆಸಿ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>‘ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳು ಜಮೀನುಗಳಿಗೆ ನುಗ್ಗಿ ದಾಳಿ ಮಾಡಿದಾಗ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಾರೆ.ಆದರೆ, ಆನೆಗಳು ಕಾಡಿನೊಳಗೆ ಹೋದರು ರಾತ್ರಿ ವೇಳೆ ಮತ್ತೆ ಜಮೀನುಗಳಿಗೆ ನುಗ್ಗುತ್ತಿವೆ’ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.</p>.<p>ಕಾಡಾನೆಗಳು ನಾಡಿನತ್ತ ಬರದಂತೆ ಶಾಶ್ವತವಾಗಿ ತಡೆಗಟ್ಟಬೇಕು. ಫಸಲು ನಿರಂತರ ನಾಶವಾಗುತ್ತಿದೆ. ಕಷ್ಟಪಟ್ಟು ಬೆಳೆದರೂ ಬೆಳೆ ಕೈಗೆ ಗಿಟ್ಟುತ್ತಿಲ್ಲ. ಈ ಭಾಗದಲ್ಲಿ ರೈತರು ಬೇಸಾಯ ಮಾಡುವುದೇ ದುಸ್ತರವಾಗಿದೆ ಎಂದು ರೈತ ಪಾರ್ಥ ಜಿ.ಗೌಡ ಹೇಳಿದರು.</p>.<p>ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರಕ್ಕಾಗಿ ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಿರುವುದಾಗಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>