<p><strong>ರಾಮನಗರ:</strong> ತಾಲ್ಲೂಕಿನ ಕುಂಭಾಪುರದಲ್ಲಿ ಕಾಡಾನೆ ಹಾವಳಿಯಿಂದ ಬೆಳೆ ನಷ್ಟವಾಗಿದ್ದು, ಆಕ್ರೋಶಗೊಂಡ ರೈತರು, ನಗರದ ಅರಣ್ಯ ಭವನದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕಚೇರಿಗೆ ಶುಕ್ರವಾರ ಬೆಳಗ್ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. </p>.<p>ಪ್ರತಿಭಟನೆ ವೇಳೆ ಮಹದೇವ ಎಂಬುವರು ವಿಷ ಕುಡಿಯಲು ಯತ್ನಿಸಿದರೆ, ಶಾಂತಕುಮಾರ್ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದರು. ಇತರೆ ಪ್ರತಿಭಟನಕಾರರು, ಪೊಲೀಸರು ಇಬ್ಬರಿಂದಲೂ ಬಾಟಲಿ ಕಸಿದುಕೊಂಡರು. </p>.<p>‘ಗುರುವಾರ ರಾತ್ರಿ ಆನೆಯು ತೆಂಗಿನ ಮರ, ರೇಷ್ಮೆ ಸೇರಿದಂತೆ ಇತರ ಬೆಳೆಗಳನ್ನು ನಾಶ ಮಾಡಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಆನೆ ಕಾಟದಿಂದ ಯಾವ ಬೆಳೆಯೂ ಉಳಿಯುತ್ತಿಲ್ಲ. ಸಮಸ್ಯೆ ತಡೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಸಾಕಾಗಿದೆ’ ಎಂದು ರೈತರು ದೂರಿದರು.</p>.<p>‘ಕಾಡಾನೆ ಬರದಂತೆ ತಡೆಯಲು ಗ್ರಾಮದಲ್ಲಿ ಮೈಕ್ ಅಳವಡಿಸಲಾಗಿತ್ತು. ಗ್ರಾಮದ ಸಮೀಪ ಜಿಲ್ಲಾಧಿಕಾರಿ ನಿವಾಸವಿದ್ದು, ಅವರಿಗೆ ಅಡಚಣೆಯಾಗುತ್ತಿದೆ ಎಂಬ ಕಾರಣಕ್ಕೆ ಪೊಲೀಸರು ಮೈಕ್ ಕಿತ್ತುಕೊಂಡು ಹೋಗಿದ್ದಾರೆ’ ಎಂದು ಆರೋಪಿಸಿದರು.</p>.<p>ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೆಳೆ ನಾಶಕ್ಕೆ ಪರಿಹಾರ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಸ್ಥಳಕ್ಕೆ ಬಂದ ಡಿಸಿಎಫ್ ರಾಮಕೃಷ್ಣಪ್ಪ ಅವರು ಪರಿಹಾರದ ಭರವಸೆ ನೀಡಿದ್ದು, ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ತಾಲ್ಲೂಕಿನ ಕುಂಭಾಪುರದಲ್ಲಿ ಕಾಡಾನೆ ಹಾವಳಿಯಿಂದ ಬೆಳೆ ನಷ್ಟವಾಗಿದ್ದು, ಆಕ್ರೋಶಗೊಂಡ ರೈತರು, ನಗರದ ಅರಣ್ಯ ಭವನದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕಚೇರಿಗೆ ಶುಕ್ರವಾರ ಬೆಳಗ್ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. </p>.<p>ಪ್ರತಿಭಟನೆ ವೇಳೆ ಮಹದೇವ ಎಂಬುವರು ವಿಷ ಕುಡಿಯಲು ಯತ್ನಿಸಿದರೆ, ಶಾಂತಕುಮಾರ್ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದರು. ಇತರೆ ಪ್ರತಿಭಟನಕಾರರು, ಪೊಲೀಸರು ಇಬ್ಬರಿಂದಲೂ ಬಾಟಲಿ ಕಸಿದುಕೊಂಡರು. </p>.<p>‘ಗುರುವಾರ ರಾತ್ರಿ ಆನೆಯು ತೆಂಗಿನ ಮರ, ರೇಷ್ಮೆ ಸೇರಿದಂತೆ ಇತರ ಬೆಳೆಗಳನ್ನು ನಾಶ ಮಾಡಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಆನೆ ಕಾಟದಿಂದ ಯಾವ ಬೆಳೆಯೂ ಉಳಿಯುತ್ತಿಲ್ಲ. ಸಮಸ್ಯೆ ತಡೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಸಾಕಾಗಿದೆ’ ಎಂದು ರೈತರು ದೂರಿದರು.</p>.<p>‘ಕಾಡಾನೆ ಬರದಂತೆ ತಡೆಯಲು ಗ್ರಾಮದಲ್ಲಿ ಮೈಕ್ ಅಳವಡಿಸಲಾಗಿತ್ತು. ಗ್ರಾಮದ ಸಮೀಪ ಜಿಲ್ಲಾಧಿಕಾರಿ ನಿವಾಸವಿದ್ದು, ಅವರಿಗೆ ಅಡಚಣೆಯಾಗುತ್ತಿದೆ ಎಂಬ ಕಾರಣಕ್ಕೆ ಪೊಲೀಸರು ಮೈಕ್ ಕಿತ್ತುಕೊಂಡು ಹೋಗಿದ್ದಾರೆ’ ಎಂದು ಆರೋಪಿಸಿದರು.</p>.<p>ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೆಳೆ ನಾಶಕ್ಕೆ ಪರಿಹಾರ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಸ್ಥಳಕ್ಕೆ ಬಂದ ಡಿಸಿಎಫ್ ರಾಮಕೃಷ್ಣಪ್ಪ ಅವರು ಪರಿಹಾರದ ಭರವಸೆ ನೀಡಿದ್ದು, ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>