ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ ಬಳಿ ಆನೆ ದಾಳಿ: ಮೃತನ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಿದ ಸಚಿವ ಖಂಡ್ರೆ

ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರಯ್ಯ ಅವರ ಕುಟುಂಬದವರನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ಮಾಡಿ, ಸಾಂತ್ವನ ಹೇಳಿದರು.
Published 4 ಜೂನ್ 2023, 9:42 IST
Last Updated 4 ಜೂನ್ 2023, 9:42 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರಯ್ಯ ಅವರ ಕುಟುಂಬದವರನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ಮಾಡಿ, ಸಾಂತ್ವನ ಹೇಳಿದರು.

ಕನಕಪುರದ ಮುತ್ತುರಾಯನದೊಡ್ಡಿ ಗ್ರಾಮಕ್ಕೆ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ಭೇಟಿ ನೀಡಿದ ಖಂಡ್ರೆ, ಕುಟುಂಬದ ಸದಸ್ಯರಿಗೆ ₹15 ಲಕ್ಷದ ಚೆಕ್ ನೀಡಿದರು. ವೀರಭದ್ರಯ್ಯ ಅವರ ಪತ್ನಿಗೆ ಐದು ವರ್ಷಗಳವರೆಗೆ ₹4 ಸಾವಿರ ಜಮಾ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಮಾತನಾಡಿದ ಖಂಡ್ರೆ, ಜಿಲ್ಲೆಯ ಇಬ್ಬರು ರೈತರು ಆನೆ ದಾಳಿಗೆ ಮೃತಪಟ್ಟಿರುವುದು ದುಃಖದ ಸಂಗತಿ.

ಈಗಾಗಲೇ ಎರಡೂ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿ, ₹15 ಲಕ್ಷ ಪರಿಹಾರ ನೀಡಲಾಗಿದೆ.

ಮಾನವ ಹಾಗೂ ಪ್ರಾಣಿ ಸಂಘರ್ಷ ತಡೆಗೆ ಶಾಶ್ವತ ಕ್ರಮ ಕೈಗೊಳ್ಳುವ ಕುರಿತು, ಶೀಘ್ರ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು

ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದ ಮಾವಿನ ತೋಟದಲ್ಲಿ ಕಾವಲುಗಾರನಾಗಿದ್ದ ವೀರಭದ್ರಯ್ಯ ಶನಿವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT