<p><strong>ಚನ್ನಪಟ್ಟಣ</strong>: ತಾಲ್ಲೂಕಿನ ವಿರೂಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಫಸಲಿಗೆ ಬಂದಿದ್ದ ನೂರಾರು ಬಾಳೆಮರಗಳನ್ನು ಧ್ವಂಸ ಮಾಡಿವೆ.</p>.<p>ಗ್ರಾಮದ ಎಚ್.ಎಂ.ಪುಟ್ಟಸ್ವಾಮಿಗೌಡ ಅವರ ನೂರಕ್ಕೂ ಹೆಚ್ಚು ಬಾಳೆಮರಗಳು, ರಾಘವೇಂದ್ರ ಅವರ ನೂರಕ್ಕೂ ಹೆಚ್ಚು ಬಾಳೆಮರಗಳನ್ನು ಆನೆಗಳು ಧ್ವಂಸ ಮಾಡಿವೆ. ಇದರ ಜೊತೆಗೆ ಅಕ್ಕಪಕ್ಕ ಜಮೀನಿನಲ್ಲಿ ಬಾಳೆ, ತೆಂಗು, ಮಾವು, ಜೋಳದ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದಿರುವ ಆನೆಗಳು ಶ್ಯಾನುಭೋಗನಹಳ್ಳಿ ಬಳಿ ಬೆಟ್ಟಗುಡ್ಡಗಳಲ್ಲಿ ಬೀಡುಬಿಟ್ಟಿದ್ದು, ರಾತ್ರಿಯ ವೇಳೆ ಬೆಟ್ಟದಿಂದ ಕೆಳಗಿಳಿದು ಅಕ್ಕಪಕ್ಕದ ಗ್ರಾಮಗಳ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>‘ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವು ಬೆಟ್ಟದಲ್ಲಿ ಸೇರಿ ಮತ್ತೆ ಮತ್ತೆ ದಾಳಿ ಮಾಡುತ್ತಿವೆ. ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕು. ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಬೇಕು’ ಎಂದು ಗ್ರಾಮದ ಮುಖಂಡ ರಾಮಕೃಷ್ಣ ಒತ್ತಾಯಿಸಿದ್ದಾರೆ.</p>.<p class="Subhead">ಆನೆಗಳನ್ನು ಓಡಿಸಿದ ಸಿಬ್ಬಂದಿ: ಈ ಭಾಗದಲ್ಲಿ ಬೀಡುಬಿಟ್ಟು ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದರು.</p>.<p>ತಾಲ್ಲೂಕಿನ ಕರಲಹಳ್ಳಿ, ಕೊಂಡಾಪುರ ಗ್ರಾಮದ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಪಟಾಕಿ ಸಿಡಿಸಿ, ಶಬ್ದ ಮಾಡುತ್ತಾ ಆನೆಗಳನ್ನು ಓಡಿಸುವ ಪ್ರಯತ್ನ ಮಾಡಿದರು.</p>.<p>ಈ ವೇಳೆ ಚದುರಿದ ಆನೆಗಳು ಹುಚ್ಚಯ್ಯನದೊಡ್ಡಿ, ಅಂಚೀಪುರ, ವಡ್ಡರಹಳ್ಳಿ ಮೂಲಕ ಬೆಟ್ಟದ ಕಡೆಗೆ ದೌಡಾಯಿಸಿದವು ಎಂದು ತಿಳಿದುಬಂದಿದೆ. ಈ ವೇಳೆ ರೈತರ ಬೆಳೆಗಳು ಧ್ವಂಸವಾದವು. ಆನೆಗಳನ್ನು ಓಡಿಸಲು ಸಿಬ್ಬಂದಿ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ವಿರೂಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಫಸಲಿಗೆ ಬಂದಿದ್ದ ನೂರಾರು ಬಾಳೆಮರಗಳನ್ನು ಧ್ವಂಸ ಮಾಡಿವೆ.</p>.<p>ಗ್ರಾಮದ ಎಚ್.ಎಂ.ಪುಟ್ಟಸ್ವಾಮಿಗೌಡ ಅವರ ನೂರಕ್ಕೂ ಹೆಚ್ಚು ಬಾಳೆಮರಗಳು, ರಾಘವೇಂದ್ರ ಅವರ ನೂರಕ್ಕೂ ಹೆಚ್ಚು ಬಾಳೆಮರಗಳನ್ನು ಆನೆಗಳು ಧ್ವಂಸ ಮಾಡಿವೆ. ಇದರ ಜೊತೆಗೆ ಅಕ್ಕಪಕ್ಕ ಜಮೀನಿನಲ್ಲಿ ಬಾಳೆ, ತೆಂಗು, ಮಾವು, ಜೋಳದ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದಿರುವ ಆನೆಗಳು ಶ್ಯಾನುಭೋಗನಹಳ್ಳಿ ಬಳಿ ಬೆಟ್ಟಗುಡ್ಡಗಳಲ್ಲಿ ಬೀಡುಬಿಟ್ಟಿದ್ದು, ರಾತ್ರಿಯ ವೇಳೆ ಬೆಟ್ಟದಿಂದ ಕೆಳಗಿಳಿದು ಅಕ್ಕಪಕ್ಕದ ಗ್ರಾಮಗಳ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>‘ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವು ಬೆಟ್ಟದಲ್ಲಿ ಸೇರಿ ಮತ್ತೆ ಮತ್ತೆ ದಾಳಿ ಮಾಡುತ್ತಿವೆ. ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕು. ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಬೇಕು’ ಎಂದು ಗ್ರಾಮದ ಮುಖಂಡ ರಾಮಕೃಷ್ಣ ಒತ್ತಾಯಿಸಿದ್ದಾರೆ.</p>.<p class="Subhead">ಆನೆಗಳನ್ನು ಓಡಿಸಿದ ಸಿಬ್ಬಂದಿ: ಈ ಭಾಗದಲ್ಲಿ ಬೀಡುಬಿಟ್ಟು ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದರು.</p>.<p>ತಾಲ್ಲೂಕಿನ ಕರಲಹಳ್ಳಿ, ಕೊಂಡಾಪುರ ಗ್ರಾಮದ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಪಟಾಕಿ ಸಿಡಿಸಿ, ಶಬ್ದ ಮಾಡುತ್ತಾ ಆನೆಗಳನ್ನು ಓಡಿಸುವ ಪ್ರಯತ್ನ ಮಾಡಿದರು.</p>.<p>ಈ ವೇಳೆ ಚದುರಿದ ಆನೆಗಳು ಹುಚ್ಚಯ್ಯನದೊಡ್ಡಿ, ಅಂಚೀಪುರ, ವಡ್ಡರಹಳ್ಳಿ ಮೂಲಕ ಬೆಟ್ಟದ ಕಡೆಗೆ ದೌಡಾಯಿಸಿದವು ಎಂದು ತಿಳಿದುಬಂದಿದೆ. ಈ ವೇಳೆ ರೈತರ ಬೆಳೆಗಳು ಧ್ವಂಸವಾದವು. ಆನೆಗಳನ್ನು ಓಡಿಸಲು ಸಿಬ್ಬಂದಿ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>