<p><strong>ರಾಮನಗರ:</strong> ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿದಿದ್ದಾರೆ.</p><p>ಮತ್ತಿಗೋಡು ಆನೆ ಶಿಬಿರದಿಂದ ಕರೆ ತಂದಿದ್ದ ಆನೆಗಳಾದ ಭೀಮ, ಅರ್ಜುನ, ಮಹೇಂದ್ರ, ಶ್ರೀಕಂಠ ಹಾಗೂ ಅಭಿಮನ್ಯು ನೆರವಿನಿಂದ ಸಿಬ್ಬಂದಿ ಆನೆ ಸೆರೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆಸುತ್ತಿದ್ದರು.</p><p>ಇಂದು ಬೆಳಿಗ್ಗೆ 6ಕ್ಕೆ ಪತ್ತೆಯಾದ ಆನೆಯನ್ನು ಸತತ ಐದು ತಾಸು ಕಾರ್ಯಾಚರಣೆ ನಡೆಸಿ, ಅರಿವಳಿಕೆ ನೀಡಿ ಸೆರೆ ಹಿಡಿಯಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p><p>ಕಾಡಾನೆ ದಾಳಿಗೆ ಮೇ 30ರಂದು ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದ ರೈತ ಕಾಳಯ್ಯ ಹಾಗೂ ಜೂನ್ 3ರಂದು ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ ಎಂಬುವರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿದಿದ್ದಾರೆ.</p><p>ಮತ್ತಿಗೋಡು ಆನೆ ಶಿಬಿರದಿಂದ ಕರೆ ತಂದಿದ್ದ ಆನೆಗಳಾದ ಭೀಮ, ಅರ್ಜುನ, ಮಹೇಂದ್ರ, ಶ್ರೀಕಂಠ ಹಾಗೂ ಅಭಿಮನ್ಯು ನೆರವಿನಿಂದ ಸಿಬ್ಬಂದಿ ಆನೆ ಸೆರೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆಸುತ್ತಿದ್ದರು.</p><p>ಇಂದು ಬೆಳಿಗ್ಗೆ 6ಕ್ಕೆ ಪತ್ತೆಯಾದ ಆನೆಯನ್ನು ಸತತ ಐದು ತಾಸು ಕಾರ್ಯಾಚರಣೆ ನಡೆಸಿ, ಅರಿವಳಿಕೆ ನೀಡಿ ಸೆರೆ ಹಿಡಿಯಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p><p>ಕಾಡಾನೆ ದಾಳಿಗೆ ಮೇ 30ರಂದು ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದ ರೈತ ಕಾಳಯ್ಯ ಹಾಗೂ ಜೂನ್ 3ರಂದು ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ ಎಂಬುವರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>