<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಮುಗ್ಗೂರು ಅರಣ್ಯ ಪ್ರದೇಶದ ಮರಳೀಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ ಗಂಡಾನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.</p>.<p>ಬನ್ನಿಮುಕ್ಕೋಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮರಳೀಪುರ ಗ್ರಾಮದ ರುದ್ರೇಗೌಡ ಮತ್ತು ಮತ್ತಿತರರಿಗೆ ಸೇರಿದ ಜಮೀನಿನಲ್ಲಿ ಭತ್ತ ಮತ್ತು ರಾಗಿ ಫಸಲು ರಕ್ಷಣೆಗಾಗಿ ಜಮೀನಿನ ಸುತ್ತಲೂ ಬಿಟ್ಟಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ ಆನೆ ಮೃತಪಟ್ಟಿದೆ.</p>.<p>ಸುಮಾರು 25 ವರ್ಷದ ಗಂಡಾನೆ ಸಾವಿಗೀಡಾಗಿದ್ದು, ಶನಿವಾರ ಬೆಳಿಗ್ಗೆ ಜಮೀನಿನ ಕಡೆ ಹೋದವರು ಆನೆ ಸತ್ತಿರುವುದನ್ನು ನೋಡಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು, ವಲಯ ಅರಣ್ಯಾಧಿಕಾರಿ ವಿಜಯಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಟಿ.ಟಿ. ಕೃಷ್ಣ, ಎಸ್ಐ ಅನಂತರಾಮ್ ಹಾಗೂ ಬೆಸ್ಕಾಂ ವಿಚಕ್ಷಣ ದಳದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಮುಗ್ಗೂರು ಅರಣ್ಯ ಪ್ರದೇಶದ ಮರಳೀಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ ಗಂಡಾನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.</p>.<p>ಬನ್ನಿಮುಕ್ಕೋಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮರಳೀಪುರ ಗ್ರಾಮದ ರುದ್ರೇಗೌಡ ಮತ್ತು ಮತ್ತಿತರರಿಗೆ ಸೇರಿದ ಜಮೀನಿನಲ್ಲಿ ಭತ್ತ ಮತ್ತು ರಾಗಿ ಫಸಲು ರಕ್ಷಣೆಗಾಗಿ ಜಮೀನಿನ ಸುತ್ತಲೂ ಬಿಟ್ಟಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ ಆನೆ ಮೃತಪಟ್ಟಿದೆ.</p>.<p>ಸುಮಾರು 25 ವರ್ಷದ ಗಂಡಾನೆ ಸಾವಿಗೀಡಾಗಿದ್ದು, ಶನಿವಾರ ಬೆಳಿಗ್ಗೆ ಜಮೀನಿನ ಕಡೆ ಹೋದವರು ಆನೆ ಸತ್ತಿರುವುದನ್ನು ನೋಡಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು, ವಲಯ ಅರಣ್ಯಾಧಿಕಾರಿ ವಿಜಯಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಟಿ.ಟಿ. ಕೃಷ್ಣ, ಎಸ್ಐ ಅನಂತರಾಮ್ ಹಾಗೂ ಬೆಸ್ಕಾಂ ವಿಚಕ್ಷಣ ದಳದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>