ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಸ್ಪರ್ಶ: ಗಂಡಾನೆ ಸಾವು

Last Updated 20 ಜೂನ್ 2021, 4:53 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಮುಗ್ಗೂರು ಅರಣ್ಯ ಪ್ರದೇಶದ ಮರಳೀಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವಿದ್ಯುತ್‌ ಸ್ಪರ್ಶದಿಂದ ಗಂಡಾನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

ಬನ್ನಿಮುಕ್ಕೋಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮರಳೀಪುರ ಗ್ರಾಮದ ರುದ್ರೇಗೌಡ ಮತ್ತು ಮತ್ತಿತರರಿಗೆ ಸೇರಿದ ಜಮೀನಿನಲ್ಲಿ ಭತ್ತ ಮತ್ತು ರಾಗಿ ಫಸಲು ರಕ್ಷಣೆಗಾಗಿ ಜಮೀನಿನ ಸುತ್ತಲೂ ಬಿಟ್ಟಿದ್ದ ತಂತಿಯಿಂದ ವಿದ್ಯುತ್‌ ಪ್ರವಹಿಸಿ ಆನೆ ಮೃತಪಟ್ಟಿದೆ.

ಸುಮಾರು 25 ವರ್ಷದ ಗಂಡಾನೆ ಸಾವಿಗೀಡಾಗಿದ್ದು, ಶನಿವಾರ ಬೆಳಿಗ್ಗೆ ಜಮೀನಿನ ಕಡೆ ಹೋದವರು ಆನೆ ಸತ್ತಿರುವುದನ್ನು ನೋಡಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು, ವಲಯ ಅರಣ್ಯಾಧಿಕಾರಿ ವಿಜಯಕುಮಾರ್‌, ಸರ್ಕಲ್‌ ಇನ್‌ಸ್ಪೆಕ್ಟರ್‌ ಟಿ.ಟಿ. ಕೃಷ್ಣ, ಎಸ್‌ಐ ಅನಂತರಾಮ್‌ ಹಾಗೂ ಬೆಸ್ಕಾಂ ವಿಚಕ್ಷಣ ದಳದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT