ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಕಾಡಾನೆ ದಾಳಿ: ಬಾಳೆ ತೋಟ ನಾಶ

Published 17 ಜನವರಿ 2024, 6:44 IST
Last Updated 17 ಜನವರಿ 2024, 6:44 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಡಾನೆ ಹಿಂಡು ಬಾಳೆ ತೋಟ ನಾಶಪಡಿಸಿವೆ. 

ಇನ್ನು 15 ದಿನದಲ್ಲಿ ಕಟಾವಿಗೆ ಬಂದಿದ್ದ 500 ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಮಾಡಿವೆ. ಸುಮಾರು ₹5 ಲಕ್ಷದಷ್ಟು ನಷ್ಟವಾಗಿದೆ ಎಂದು ತೋಟದ ಮಾಲೀಕ ಮನು ಕುಮಾರ್‌ ತಿಳಿಸಿದ್ದಾರೆ.

ಗ್ರಾಮದಲ್ಲಿ ಐದಾರು ಆನೆಗಳ ಹಿಂಡಿದ್ದು ಎರಡು ಆನೆ ಮಾತ್ರ ತೋಟಕ್ಕೆ ನುಗ್ಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT