ಗುರುವಾರ ರಾತ್ರಿ ಮೂರು ಆನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಟ್ಟಿತ್ತು. ಈ ಸಂದರ್ಭ ಜಮೀನಿನ ಟ್ರಾನ್ಸ್ಫಾರ್ಮರ್ ಕಂಬದ ತಂತಿಗೆ ಸೊಂಡಿಲು ತಾಗಿ 30 ವರ್ಷ ಪ್ರಾಯದ ಗಂಡಾನೆ ಮೃತಪಟ್ಟಿತು. ಉಪ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್ ನೇತೃತ್ವದ ತಂಡಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದು, ಆನೆಯ ಮರಣೋತ್ತರ ಪರೀಕ್ಷೆ ಬಳಿಕ ಕಳೇಬರವನ್ನು ಮಣ್ಣಿನಲ್ಲಿ ಹೂಳಲಾಯಿತು.