ಬೋಳಪ್ಪನ ಕೆರೆ ಬಳಿ ಆನೆ ಕಾಣಿಸಿಕೊಂಡಿದ್ದು, ಅದನ್ನು ಹಿಮ್ಮೆಟ್ಟಿಸುವ ಕೆಲಸದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರತರಾಗಿದ್ದರು. ಈ ವೇಳೆ ಲಕ್ಷ್ಮಿಕಾಂತ್ ಸಹ ಇದ್ದು, ಆಯಾ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಪಕ್ಕೆಲುಬಿನ ಮೂಳೆ ಮುರಿದಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.