ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದ ಮಾವಿನ ತೋಟದಲ್ಲಿ ಮಂಗಳವಾರ ಆನೆ ತುಳಿದು ರೈತ ಸತೀಶ್ (35) ಮೃತಪಟ್ಟರು.
ಮಧ್ಯಾಹ್ನ 3ರ ಸುಮಾರಿಗೆ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೇಲಿ ಮರೆಯಿಂದ ಆನೆ ದಾಳಿ ನಡೆಸಿದ್ದು, ತುಳಿತಕ್ಕೆ ಒಳಗಾದ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದರು.
ಈ ಗ್ರಾಮಕ್ಕೆ ಹೊಂದಿಕೊಂಡಂತೆಯೇ ತೆಂಗಿನಕಲ್ಲು ಅರಣ್ಯವಿದ್ದು, ಈ ಭಾಗದಲ್ಲಿ ಆನೆಗಳ ದಾಳಿ ಈಚೆಗೆ ಸಾಮಾನ್ಯವಾಗಿದೆ. ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದ್ದರೂ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.