<p><strong>ಹಾರೋಹಳ್ಳಿ:</strong> ಅರಣ್ಯದಲ್ಲಿ ದನ ಮೇಯಿಸುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೆಂಕಟಾಚಲಯ್ಯ(65) ಮೃತರು.</p>.<p>ಊರಿಗೆ ಹೊಂದಿಕೊಂಡಂತಿರುವ ಅರಣ್ಯದಂಚಿನಲ್ಲಿ ವೆಂಕಟಾಚಲಯ್ಯ ಅವರು ಬೆಳಿಗ್ಗೆ 10.30ರ ಸುಮಾರಿಗೆ ದನ ಮೇಯಿಸುತ್ತಿದ್ದರು. ಆಗ ಏಕಾಏಕಿ ಬಂದ ಒಂಟಿ ಸಲಗವೊಂದು ಮೇಲೆ ದಾಳಿ ನಡೆಸಿ ತುಳಿದು ಸಾಯಿಸಿದೆ.</p>.<p>ಗ್ರಾಮದಂಚಿನಲ್ಲಿ ಕಾಣಿಸಿಕೊಂಡ ಆನೆಯನ್ನು ಗಮನಿಸಿದ ಸ್ಥಳೀಯರು, ಸ್ಥಳಕ್ಕೆ ಹೋಗಿ ಹುಡುಕಾಟ ನಡೆಸಿದಾಗ ವೆಂಕಟಚಾಲಯ್ಯ ಅವರ ಶವ ಸಿಕ್ಕಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಎಸಿಎಫ್ ರವಿಕುಮಾರ್, ಆರ್ಎಫ್ಒ ಬಿಂದು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಶವಸಂಸ್ಕಾರಕ್ಕೆ ನಿರಾಕರಣೆ: ಗ್ರಾಮ ಸೇರಿದಂತೆ ತಾಲ್ಲೂಕಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಜನರು ಓಡಾಡುವುದೇ ಕಷ್ಟವಾಗಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಜೊತೆಗೆ ಆನೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಘಟನೆಯು ಅರಣ್ಯದಲ್ಲಿ ನಡೆದಿರುವುದರಿಂದ ಪರಿಹಾರ ಸಿಗುವುದು ಅನುಮಾನವಿದೆ ಎಂದು ಇಲಾಖೆ ಅಧಿಕಾರಿಗಳು ಹೇಳಿದರು. ಹಾಗಾಗಿ, ಮೇಲಧಿಕಾರಿಗಳು ಬಂದು ಪರಿಹಾರದ ಭರವಸೆ ನೀಡುವವರೆಗೆ ಶವದ ಮರಣೋತ್ತರ ಪರೀಕ್ಷೆ ಮತ್ತು ಶವ ಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>‘ಗ್ರಾಮಸ್ಥರು ಸಂಜೆವರೆಗೆ ಕಾದರೂ ಮೇಲಧಿಕಾರಿಗಳು ಬಂದಿಲ್ಲ. ನಾಳೆ ಸ್ಥಳಕ್ಕೆ ಶಾಸಕರು, ಸಂಸದರು, ಮಾಜಿ ಸಂಸದರು ಹಾಗೂ ಅಧಿಕಾರಿಗಳು ಬಂದು ನಮ್ಮ ಬೇಡಿಕೆಗೆ ಸ್ಪಂದಿಸಬೇಕು. ಬಳಿಕವೇ ಅಂತ್ಯಸಂಸ್ಕಾರ ಮಾಡುತ್ತೇವೆ’ ಎಂದು ಗ್ರಾಮಸ್ಥ ಅರ್ಜುನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸದ್ಯ ವೆಂಕಟಾಚಲಯ್ಯ ಅವರ ಶವ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿದೆ. ಗ್ರಾಮದ ಹಿರಿಯರಾಗಿದ್ದ ವೆಂಕಟಾಚಲಯ್ಯ ಅವರು, ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ದಾನವಾಗಿ ನೀಡಿದ್ದರು ಎಂದು ಗ್ರಾಮಸ್ಥರು ನೆನೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಅರಣ್ಯದಲ್ಲಿ ದನ ಮೇಯಿಸುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೆಂಕಟಾಚಲಯ್ಯ(65) ಮೃತರು.</p>.<p>ಊರಿಗೆ ಹೊಂದಿಕೊಂಡಂತಿರುವ ಅರಣ್ಯದಂಚಿನಲ್ಲಿ ವೆಂಕಟಾಚಲಯ್ಯ ಅವರು ಬೆಳಿಗ್ಗೆ 10.30ರ ಸುಮಾರಿಗೆ ದನ ಮೇಯಿಸುತ್ತಿದ್ದರು. ಆಗ ಏಕಾಏಕಿ ಬಂದ ಒಂಟಿ ಸಲಗವೊಂದು ಮೇಲೆ ದಾಳಿ ನಡೆಸಿ ತುಳಿದು ಸಾಯಿಸಿದೆ.</p>.<p>ಗ್ರಾಮದಂಚಿನಲ್ಲಿ ಕಾಣಿಸಿಕೊಂಡ ಆನೆಯನ್ನು ಗಮನಿಸಿದ ಸ್ಥಳೀಯರು, ಸ್ಥಳಕ್ಕೆ ಹೋಗಿ ಹುಡುಕಾಟ ನಡೆಸಿದಾಗ ವೆಂಕಟಚಾಲಯ್ಯ ಅವರ ಶವ ಸಿಕ್ಕಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಎಸಿಎಫ್ ರವಿಕುಮಾರ್, ಆರ್ಎಫ್ಒ ಬಿಂದು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಶವಸಂಸ್ಕಾರಕ್ಕೆ ನಿರಾಕರಣೆ: ಗ್ರಾಮ ಸೇರಿದಂತೆ ತಾಲ್ಲೂಕಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಜನರು ಓಡಾಡುವುದೇ ಕಷ್ಟವಾಗಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಜೊತೆಗೆ ಆನೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಘಟನೆಯು ಅರಣ್ಯದಲ್ಲಿ ನಡೆದಿರುವುದರಿಂದ ಪರಿಹಾರ ಸಿಗುವುದು ಅನುಮಾನವಿದೆ ಎಂದು ಇಲಾಖೆ ಅಧಿಕಾರಿಗಳು ಹೇಳಿದರು. ಹಾಗಾಗಿ, ಮೇಲಧಿಕಾರಿಗಳು ಬಂದು ಪರಿಹಾರದ ಭರವಸೆ ನೀಡುವವರೆಗೆ ಶವದ ಮರಣೋತ್ತರ ಪರೀಕ್ಷೆ ಮತ್ತು ಶವ ಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>‘ಗ್ರಾಮಸ್ಥರು ಸಂಜೆವರೆಗೆ ಕಾದರೂ ಮೇಲಧಿಕಾರಿಗಳು ಬಂದಿಲ್ಲ. ನಾಳೆ ಸ್ಥಳಕ್ಕೆ ಶಾಸಕರು, ಸಂಸದರು, ಮಾಜಿ ಸಂಸದರು ಹಾಗೂ ಅಧಿಕಾರಿಗಳು ಬಂದು ನಮ್ಮ ಬೇಡಿಕೆಗೆ ಸ್ಪಂದಿಸಬೇಕು. ಬಳಿಕವೇ ಅಂತ್ಯಸಂಸ್ಕಾರ ಮಾಡುತ್ತೇವೆ’ ಎಂದು ಗ್ರಾಮಸ್ಥ ಅರ್ಜುನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸದ್ಯ ವೆಂಕಟಾಚಲಯ್ಯ ಅವರ ಶವ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿದೆ. ಗ್ರಾಮದ ಹಿರಿಯರಾಗಿದ್ದ ವೆಂಕಟಾಚಲಯ್ಯ ಅವರು, ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ದಾನವಾಗಿ ನೀಡಿದ್ದರು ಎಂದು ಗ್ರಾಮಸ್ಥರು ನೆನೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>