<p><strong>ದೇವನಹಳ್ಳಿ:</strong> ಜಿಲ್ಲೆಯಲ್ಲಿ ನೋಂದಣಿಯಾಗಿ ಕೌಶಲ ಹೊಂದಿರುವ ವಲಸೆ ಕಾರ್ಮಿಕರಿಗೆ ಶ್ರೀಘ್ರವಾಗಿ ಉದ್ಯೋಗ ನೀಡಬೇಕು. ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಕೌಶಲ ತರಬೇತಿ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ವಲಸೆ ಕಾರ್ಮಿಕರಿಗೆ ಉದ್ಯೋಗ ಹಾಗೂ ತರಬೇತಿ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಿಲ್ಲೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಎಲೆಕ್ಟ್ರಿಷಿಯನ್, ಪ್ಲಂಬರ್, ಪೇಂಟರ್, ಬಡಗಿ, ಚಾಲಕರು ಸೇರಿದಂತೆ ಅಸಂಘಟಿತ ವಲಸೆ ಕಾರ್ಮಿಕರಿಗೆ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಮರು ಕೌಶಲ ತರಬೇತಿ ನೀಡಿ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.</p>.<p>ಕೌಶಲ ತರಬೇತಿ ಪಡೆದ ವಲಸೆ ಕಾರ್ಮಿಕರಿಗೆ ಇತರ ಇಲಾಖೆಯ ಸ್ವ-ಉದ್ಯೋಗ ಯೋಜನೆಗಳ ಅನುಕೂಲ ಪಡೆಯುವಂತೆ ಸಮನ್ವಯ ಸಾಧಿಸಬೇಕು ಎಂದರು.</p>.<p>ಸ್ವಸಹಾಯ ಗುಂಪುಗಳು ತಯಾರಿಸುವ ಮಾಸ್ಕ್ಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಜಾಗ ಕಲ್ಪಿಸಲಾಗುವುದು. ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಭೂಶಂಕರ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳುಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಜಿಲ್ಲೆಯಲ್ಲಿ ನೋಂದಣಿಯಾಗಿ ಕೌಶಲ ಹೊಂದಿರುವ ವಲಸೆ ಕಾರ್ಮಿಕರಿಗೆ ಶ್ರೀಘ್ರವಾಗಿ ಉದ್ಯೋಗ ನೀಡಬೇಕು. ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಕೌಶಲ ತರಬೇತಿ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ವಲಸೆ ಕಾರ್ಮಿಕರಿಗೆ ಉದ್ಯೋಗ ಹಾಗೂ ತರಬೇತಿ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಿಲ್ಲೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಎಲೆಕ್ಟ್ರಿಷಿಯನ್, ಪ್ಲಂಬರ್, ಪೇಂಟರ್, ಬಡಗಿ, ಚಾಲಕರು ಸೇರಿದಂತೆ ಅಸಂಘಟಿತ ವಲಸೆ ಕಾರ್ಮಿಕರಿಗೆ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಮರು ಕೌಶಲ ತರಬೇತಿ ನೀಡಿ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.</p>.<p>ಕೌಶಲ ತರಬೇತಿ ಪಡೆದ ವಲಸೆ ಕಾರ್ಮಿಕರಿಗೆ ಇತರ ಇಲಾಖೆಯ ಸ್ವ-ಉದ್ಯೋಗ ಯೋಜನೆಗಳ ಅನುಕೂಲ ಪಡೆಯುವಂತೆ ಸಮನ್ವಯ ಸಾಧಿಸಬೇಕು ಎಂದರು.</p>.<p>ಸ್ವಸಹಾಯ ಗುಂಪುಗಳು ತಯಾರಿಸುವ ಮಾಸ್ಕ್ಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಜಾಗ ಕಲ್ಪಿಸಲಾಗುವುದು. ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಭೂಶಂಕರ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳುಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>