ಇ.ಡಿಯನ್ನು ಕೇಂದ್ರ ಸರ್ಕಾರ ನಿಯಂತ್ರಣ ಮಾಡುತ್ತಿದೆ. ಹೀಗಾದರೆ ಕಾನೂನಿಗೆ ಬೆಲೆ ಇಲ್ಲದಂತೆ ಆಗುತ್ತದೆ. ಶಿವಕುಮಾರ್ ಕೇವಲ ಆರೋಪಿ ಅಷ್ಟೇ. ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ ಆಗಿಲ್ಲ. ಆದರೆ ಈಗಾಗಲೇ ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಅವರಿಗೆ ಜೈಲಿನಲ್ಲಿ ಕನಿಷ್ಠ ಹಾಸಿಗೆ, ದಿಂಬು, ಮಾತ್ರೆಗಳನ್ನು ನೀಡಿಲ್ಲ. ಕುಟುಂಬದವರು, ಆಪ್ತರ ಭೇಟಿಗೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ದೂರಿದರು.