<p><strong>ಮಾಗಡಿ: </strong>‘ಮನುಷ್ಯನ ದುರಾಸೆಗೆ ಪರಿಸರ ನಾಶವಾಗದಂತೆ ನಾವೆಲ್ಲರೂ ಜನ ಜಾಗೃತಿ ವಹಿಸಬೇಕಿದೆ’ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಮಿತಿ ರಾಜ್ಯ ಸಂಚಾಲಕ ಮಹಮದ್ ಇಮ್ರಾನ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ನಡೆದ ಹೆಲ್ತಿ ಕ್ಯಾಂಪಸ್ 2019, 'ಜಲಸಂರಕ್ಷಣೆ ನಮ್ಮ ಹೊಣೆ' ವಿಡಿಯೊ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನೀರಿನ ಅತಿಯಾದ ಬಳಕೆ ಆತಂಕಕಾರಿ ಬೆಳವಣಿಗೆ ಆಗಿದೆ. ಮಳೆಗಾಲದಲ್ಲಿ ಸಸಿನೆಟ್ಟು ಪರಿಸರ ರಕ್ಷಿಸುವುದರ ಜೆತೆಗೆ ಅಂತರ್ಜಲ ಸಂರಕ್ಷಿಸಬೇಕಿದೆ. ಮಳೆ ನೀರು ಪದ್ಧತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಮುಖ್ಯಶಿಕ್ಷಕ ಮಹದೇವಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ನೀರಿನ ಮಿತ ಬಳಕೆ ಮಾಡುವುದನ್ನು ಕರಗತ ಮಾಡಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತಾಲ್ಲೂಕು ಘಟಕದ ಅಧ್ಯಕ್ಷ ಸುಹೇಲ್ ಮಾತನಾಡಿ, ‘ಪರಿಸರ ಮತ್ತು ಜಲಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕಿದೆ’ ಎಂದರು.</p>.<p>ಮುಹಿನ್, ಅಲ್ಲಾಭಕ್ಷ್ಯ್, ಶಬೀರ್, ಮಸ್ತಾನ್, ಸಲೀಂ, ಮಹಮದ್ ಶಬೀರ್, ಮುಬಿನಾಖಾನ್, ಫಾತಿಮಾಖಾನಂ, ಮಹಮದ್ ಶುಕೂರ್, ಶಿಕ್ಷಕ ಜಯದೇವ್ ಮಾತನಾಡಿದರು. ಶಾಲೆ ಆವರಣದಲ್ಲಿ ಸಸಿನೆಟ್ಟು ನೀರೆರೆಯಲಾಯಿತು. ಜಲಸಂರಕ್ಷಣೆ ಬಗ್ಗೆ ವಿಡಿಯೊ ಚಿತ್ರಣ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>‘ಮನುಷ್ಯನ ದುರಾಸೆಗೆ ಪರಿಸರ ನಾಶವಾಗದಂತೆ ನಾವೆಲ್ಲರೂ ಜನ ಜಾಗೃತಿ ವಹಿಸಬೇಕಿದೆ’ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಮಿತಿ ರಾಜ್ಯ ಸಂಚಾಲಕ ಮಹಮದ್ ಇಮ್ರಾನ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ನಡೆದ ಹೆಲ್ತಿ ಕ್ಯಾಂಪಸ್ 2019, 'ಜಲಸಂರಕ್ಷಣೆ ನಮ್ಮ ಹೊಣೆ' ವಿಡಿಯೊ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನೀರಿನ ಅತಿಯಾದ ಬಳಕೆ ಆತಂಕಕಾರಿ ಬೆಳವಣಿಗೆ ಆಗಿದೆ. ಮಳೆಗಾಲದಲ್ಲಿ ಸಸಿನೆಟ್ಟು ಪರಿಸರ ರಕ್ಷಿಸುವುದರ ಜೆತೆಗೆ ಅಂತರ್ಜಲ ಸಂರಕ್ಷಿಸಬೇಕಿದೆ. ಮಳೆ ನೀರು ಪದ್ಧತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಮುಖ್ಯಶಿಕ್ಷಕ ಮಹದೇವಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ನೀರಿನ ಮಿತ ಬಳಕೆ ಮಾಡುವುದನ್ನು ಕರಗತ ಮಾಡಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತಾಲ್ಲೂಕು ಘಟಕದ ಅಧ್ಯಕ್ಷ ಸುಹೇಲ್ ಮಾತನಾಡಿ, ‘ಪರಿಸರ ಮತ್ತು ಜಲಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕಿದೆ’ ಎಂದರು.</p>.<p>ಮುಹಿನ್, ಅಲ್ಲಾಭಕ್ಷ್ಯ್, ಶಬೀರ್, ಮಸ್ತಾನ್, ಸಲೀಂ, ಮಹಮದ್ ಶಬೀರ್, ಮುಬಿನಾಖಾನ್, ಫಾತಿಮಾಖಾನಂ, ಮಹಮದ್ ಶುಕೂರ್, ಶಿಕ್ಷಕ ಜಯದೇವ್ ಮಾತನಾಡಿದರು. ಶಾಲೆ ಆವರಣದಲ್ಲಿ ಸಸಿನೆಟ್ಟು ನೀರೆರೆಯಲಾಯಿತು. ಜಲಸಂರಕ್ಷಣೆ ಬಗ್ಗೆ ವಿಡಿಯೊ ಚಿತ್ರಣ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>