<p><strong>ಕನಕಪುರ:</strong> ಪರಿಸರ ಪ್ರೇಮಿಗಳ ಸಂಘ ಮಳಗಾಳು ಇದರ ಪದವಿ ಸ್ವೀಕಾರ ಸಮಾರಂಭ ಬಿಳಿಗಿರಿರಂಗನ ಬೆಟ್ಟದಲ್ಲಿ ಭಾನುವಾರ ನಡೆಯಿತು.</p>.<p>ಸಂಘದ ನೂತನ ಅಧ್ಯಕ್ಷರಾಗಿ ಪರಿಸರ ಪ್ರೇಮಿ ಮರಸಪ್ಪ ರವಿ, ಕಾರ್ಯದರ್ಶಿಯಾಗಿ ಮಹದೇವ್, ಖಜಾಂಚಿಯಾಗಿ ಎಂ.ವೆಂಕಟೇಶ್, ಗೌರವ ಅಧ್ಯಕ್ಷರಾಗಿ ಶ್ರೀನಿವಾಸ್ ನೇಮಕಗೊಂಡು ಪದವಿ ಸ್ವೀಕಾರ ಮಾಡಿದರು.</p>.<p>ನೂತನ ಅಧ್ಯಕ್ಷ ಮರಸಪ್ಪ ರವಿ ಮಾತನಾಡಿ, ಪರಿಸರ ಎಲ್ಲವನ್ನು ಕೊಟ್ಟಿದೆ. ಆದರೆ, ದುರಾಸೆಯಿಂದ ಪರಿಸರ ನಾಶ ಮಾಡಲಾಗುತ್ತಿದೆ. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದರು. </p>.<p>ಪ್ರತಿವರ್ಷ 10 ಸಾವಿರಕ್ಕೂ ಹೆಚ್ಚು ಗಿಡಗಳನ್ನು ಸಂಘದಿಂದ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲಿ ಖಾಲಿ ಜಾಗ ಸಿಗುತ್ತದೆಯೋ ಅಲ್ಲಿ ಗಿಡ ನೆಟ್ಟು ಮರವಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತ ಡಿವೈಎಸ್ಪಿ ಶ್ರೀನಿವಾಸ್ ಮಾತನಾಡಿ, ಪರಿಸರ ಸಂಘ ಎರಡೂವರೆ ವರ್ಷಗಳಿಂದ ಸತತವಾಗಿ ಗಿಡಗಳು ನೆಡುವ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಪರಿಸರ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿ ಗ್ರಾಮದಲ್ಲೂ ಪರಿಸರ ಪ್ರೇಮಿಗಳ ಸಂಘ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಚಿಂತನೆ ನಡೆಸಬೇಕೆಂದು ಹೇಳಿದರು.</p>.<p>ಕಾರ್ಯದರ್ಶಿ ಮಹದೇವ್, ಖಜಾಂಚಿ ವೆಂಕಟೇಶ್, ಸವಿತಾ ಮಾದೇವ ಶಾರದ ಜಯರಾಮ್, ಸಾವಿತ್ರಿ ವೆಂಕಟರಮಣ ಸ್ವಾಮಿ, ರತ್ನ ಮರತಪ್ಪ ರವಿ, ನಿರ್ದೇಶಕರಾದ ಜೈರಾಮ್, ಅಕ್ಕಿ ವೆಂಕಟೇಶ್, ನಾಗರಾಜ್, ದಾಸಪ್ಪ, ವೆಂಕಟರಮಣ ಸ್ವಾಮಿ, ರಾಜೇಶ್, ಲಕ್ಷ್ಮಿ ಕಾಂತ, ಮಾಸ್ಟರ್ ಶ್ರೀಧರ್, ರಂಗಸ್ವಾಮಿ, ಎಂ.ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಪರಿಸರ ಪ್ರೇಮಿಗಳ ಸಂಘ ಮಳಗಾಳು ಇದರ ಪದವಿ ಸ್ವೀಕಾರ ಸಮಾರಂಭ ಬಿಳಿಗಿರಿರಂಗನ ಬೆಟ್ಟದಲ್ಲಿ ಭಾನುವಾರ ನಡೆಯಿತು.</p>.<p>ಸಂಘದ ನೂತನ ಅಧ್ಯಕ್ಷರಾಗಿ ಪರಿಸರ ಪ್ರೇಮಿ ಮರಸಪ್ಪ ರವಿ, ಕಾರ್ಯದರ್ಶಿಯಾಗಿ ಮಹದೇವ್, ಖಜಾಂಚಿಯಾಗಿ ಎಂ.ವೆಂಕಟೇಶ್, ಗೌರವ ಅಧ್ಯಕ್ಷರಾಗಿ ಶ್ರೀನಿವಾಸ್ ನೇಮಕಗೊಂಡು ಪದವಿ ಸ್ವೀಕಾರ ಮಾಡಿದರು.</p>.<p>ನೂತನ ಅಧ್ಯಕ್ಷ ಮರಸಪ್ಪ ರವಿ ಮಾತನಾಡಿ, ಪರಿಸರ ಎಲ್ಲವನ್ನು ಕೊಟ್ಟಿದೆ. ಆದರೆ, ದುರಾಸೆಯಿಂದ ಪರಿಸರ ನಾಶ ಮಾಡಲಾಗುತ್ತಿದೆ. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದರು. </p>.<p>ಪ್ರತಿವರ್ಷ 10 ಸಾವಿರಕ್ಕೂ ಹೆಚ್ಚು ಗಿಡಗಳನ್ನು ಸಂಘದಿಂದ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲಿ ಖಾಲಿ ಜಾಗ ಸಿಗುತ್ತದೆಯೋ ಅಲ್ಲಿ ಗಿಡ ನೆಟ್ಟು ಮರವಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತ ಡಿವೈಎಸ್ಪಿ ಶ್ರೀನಿವಾಸ್ ಮಾತನಾಡಿ, ಪರಿಸರ ಸಂಘ ಎರಡೂವರೆ ವರ್ಷಗಳಿಂದ ಸತತವಾಗಿ ಗಿಡಗಳು ನೆಡುವ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಪರಿಸರ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿ ಗ್ರಾಮದಲ್ಲೂ ಪರಿಸರ ಪ್ರೇಮಿಗಳ ಸಂಘ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಚಿಂತನೆ ನಡೆಸಬೇಕೆಂದು ಹೇಳಿದರು.</p>.<p>ಕಾರ್ಯದರ್ಶಿ ಮಹದೇವ್, ಖಜಾಂಚಿ ವೆಂಕಟೇಶ್, ಸವಿತಾ ಮಾದೇವ ಶಾರದ ಜಯರಾಮ್, ಸಾವಿತ್ರಿ ವೆಂಕಟರಮಣ ಸ್ವಾಮಿ, ರತ್ನ ಮರತಪ್ಪ ರವಿ, ನಿರ್ದೇಶಕರಾದ ಜೈರಾಮ್, ಅಕ್ಕಿ ವೆಂಕಟೇಶ್, ನಾಗರಾಜ್, ದಾಸಪ್ಪ, ವೆಂಕಟರಮಣ ಸ್ವಾಮಿ, ರಾಜೇಶ್, ಲಕ್ಷ್ಮಿ ಕಾಂತ, ಮಾಸ್ಟರ್ ಶ್ರೀಧರ್, ರಂಗಸ್ವಾಮಿ, ಎಂ.ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>