<p><strong>ಮಾಗಡಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಬೇಕಾದ ಉಪಕರಣಗಳನ್ನು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ₹ 25 ಲಕ್ಷ ವೆಚ್ಚದಡಿ ಒದಗಿಸಲಾಗಿದೆ ಎಂದು ಶಾಸಕ ಎ. ಮಂಜುನಾಥ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಐಸಿಯು ಘಟಕಕ್ಕೆ ಒದಗಿಸಿರುವ ಉಪಕರಣಗಳ ಬಳಕೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆ ವೈದ್ಯರು ಐಸಿಯು ಘಟಕದ ಸದುಪಯೋಗ ಪಡೆದುಕೊಂಡು ಗ್ರಾಮೀಣ ಜನತೆಗೆ ಉತ್ತಮ ಚಿಕಿತ್ಸೆ ನೀಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿದ್ದಾರೆ. 24 ಗಂಟೆಯೂ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಆಸ್ಪತ್ರೆಯ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ಮಾತನಾಡಿ, ನಮ್ಮಲ್ಲಿನ ಸವಲತ್ತುಗಳನ್ನು ಬಳಸಿಕೊಂಡು ಎಲ್ಲಾ ವಿಧವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಐಸಿಯು ಘಟಕಕ್ಕೆ ಉಪಕರಣಗಳಿಲ್ಲದೆ ತೊಂದರೆಯಾಗಿತ್ತು. ಉಪಕರಣಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿರುವ ಸರ್ಕಾರ ಮತ್ತು ಶಾಸಕ ಸಹಾಯ ವನ್ನು ಸ್ಮರಿಸುತ್ತೇವೆ ಎಂದರು.</p>.<p>ವೈದ್ಯರಾದ ಡಾ.ಆಶಾದೇವಿ, ಡಾ.ಜ್ಞಾನಪ್ರಕಾಶ್, ಡಾ.ರಾಕೇಶ್, ಡಾ.ರಫೀಕ್, ಡಾ.ಯಶವಂತ್, ಡಾ.ಫಾರೂಕ್, ಡಾ.ಅಭಿಜಿತ್, ಡಾ.ನಾಗನಾಥ್, ಡಾ.ಪಲ್ಲವಿ, ಡಾ.ಮಂಜುಳಾ, ಡಾ.ರಶ್ಮಿ, ಡಾ.ಮುದೊಳೆ, ಡಾ.ಚಂದ್ರಲೇಖಾ ಮುದೊಳೆ, ನರ್ಸಿಂಗ್ ಅಧೀಕ್ಷಕಿ ಪದ್ಮಾ, ಫಾರ್ಮಾಸಿಸ್ಟ್ ಗುಣಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಬೇಕಾದ ಉಪಕರಣಗಳನ್ನು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ₹ 25 ಲಕ್ಷ ವೆಚ್ಚದಡಿ ಒದಗಿಸಲಾಗಿದೆ ಎಂದು ಶಾಸಕ ಎ. ಮಂಜುನಾಥ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಐಸಿಯು ಘಟಕಕ್ಕೆ ಒದಗಿಸಿರುವ ಉಪಕರಣಗಳ ಬಳಕೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆ ವೈದ್ಯರು ಐಸಿಯು ಘಟಕದ ಸದುಪಯೋಗ ಪಡೆದುಕೊಂಡು ಗ್ರಾಮೀಣ ಜನತೆಗೆ ಉತ್ತಮ ಚಿಕಿತ್ಸೆ ನೀಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿದ್ದಾರೆ. 24 ಗಂಟೆಯೂ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಆಸ್ಪತ್ರೆಯ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ಮಾತನಾಡಿ, ನಮ್ಮಲ್ಲಿನ ಸವಲತ್ತುಗಳನ್ನು ಬಳಸಿಕೊಂಡು ಎಲ್ಲಾ ವಿಧವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಐಸಿಯು ಘಟಕಕ್ಕೆ ಉಪಕರಣಗಳಿಲ್ಲದೆ ತೊಂದರೆಯಾಗಿತ್ತು. ಉಪಕರಣಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿರುವ ಸರ್ಕಾರ ಮತ್ತು ಶಾಸಕ ಸಹಾಯ ವನ್ನು ಸ್ಮರಿಸುತ್ತೇವೆ ಎಂದರು.</p>.<p>ವೈದ್ಯರಾದ ಡಾ.ಆಶಾದೇವಿ, ಡಾ.ಜ್ಞಾನಪ್ರಕಾಶ್, ಡಾ.ರಾಕೇಶ್, ಡಾ.ರಫೀಕ್, ಡಾ.ಯಶವಂತ್, ಡಾ.ಫಾರೂಕ್, ಡಾ.ಅಭಿಜಿತ್, ಡಾ.ನಾಗನಾಥ್, ಡಾ.ಪಲ್ಲವಿ, ಡಾ.ಮಂಜುಳಾ, ಡಾ.ರಶ್ಮಿ, ಡಾ.ಮುದೊಳೆ, ಡಾ.ಚಂದ್ರಲೇಖಾ ಮುದೊಳೆ, ನರ್ಸಿಂಗ್ ಅಧೀಕ್ಷಕಿ ಪದ್ಮಾ, ಫಾರ್ಮಾಸಿಸ್ಟ್ ಗುಣಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>