<p><strong>ಸಾತನೂರು (ಕನಕಪುರ): </strong>ಸಮಾಜದಲ್ಲಿ ಅತ್ಯುತ್ತಮ ಸೇವಾ ಕ್ಷೇತ್ರವಾದ ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಪ್ರಶಂಸನೀಯವೆಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಗಬ್ಬಾಡಿ ಕಾಡೇಗೌಡ ಹೇಳಿದರು.</p>.<p>ಇಲ್ಲಿನ ಸಾತನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಡಿ.ರಂಗಸ್ವಾಮಿ ಅವರಿಗೆ ಜಿಲ್ಲಾ ಲೇಖಕರ ವೇದಿಕೆ ಹಾಗೂ ರಾಜ್ಯ ಒಕ್ಕಲಿಗರ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. ಸಮಾಜದಿಂದ ಏನನ್ನು ಬಯಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ವರ್ಗವನ್ನು ಸನ್ಮಾನಿಸುವ ಪ್ರೋತ್ಸಾಹಿಸುವ ಕೆಲಸವಾಗಬೇಕು. ಅಂತಹ ಕೆಲಸವನ್ನು ಜಿಲ್ಲಾ ಲೇಖಕರ ವೇದಿಕೆಯು ನೆರವೇರಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿ, ‘ಶಿಕ್ಷಕರು ಯಾವುದೆ ಪದೋನ್ನತಿ ಬಯಸದೆ 30-40 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸುತ್ತಾರೆ. ಅವರಿಂದ ಕಲಿತವರು ದೊಡ್ಡ ದೊಡ್ಡ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿದ್ಯಾರ್ಥಿಗಳಲ್ಲಿಯೇ ತಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳುತ್ತಾರೆ’ ಎಂದು ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಾಹಿತಿ ಮಾಯಣ್ಣ, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು, ಕನ್ನಡಾಂಬೆ ಸಾಂಸ್ಕೃತಿಕ ಸಾಮಾಜಿಕ ಟ್ರಸ್ಟ್ ಅಧ್ಯಕ್ಷ ಅಸ್ಗರ್ಖಾನ್, ಮುಖ್ಯ ಶಿಕ್ಷಕರಾದ ವಿ.ರಾಜು, ಬಸವೇಗೌಡ, ವೇದಿಕೆ ಪದಾಧಿಕಾರಿಗಳಾದ ಟಿ.ಎಂ.ರಾಮಯ್ಯ, ಬಿ.ಶಿವಲಿಂಗಯ್ಯ, ತಿಪ್ಪೇಸ್ವಾಮಿ, ರೇಣುಕಾದೇವಿ ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾತನೂರು (ಕನಕಪುರ): </strong>ಸಮಾಜದಲ್ಲಿ ಅತ್ಯುತ್ತಮ ಸೇವಾ ಕ್ಷೇತ್ರವಾದ ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಪ್ರಶಂಸನೀಯವೆಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಗಬ್ಬಾಡಿ ಕಾಡೇಗೌಡ ಹೇಳಿದರು.</p>.<p>ಇಲ್ಲಿನ ಸಾತನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಡಿ.ರಂಗಸ್ವಾಮಿ ಅವರಿಗೆ ಜಿಲ್ಲಾ ಲೇಖಕರ ವೇದಿಕೆ ಹಾಗೂ ರಾಜ್ಯ ಒಕ್ಕಲಿಗರ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. ಸಮಾಜದಿಂದ ಏನನ್ನು ಬಯಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ವರ್ಗವನ್ನು ಸನ್ಮಾನಿಸುವ ಪ್ರೋತ್ಸಾಹಿಸುವ ಕೆಲಸವಾಗಬೇಕು. ಅಂತಹ ಕೆಲಸವನ್ನು ಜಿಲ್ಲಾ ಲೇಖಕರ ವೇದಿಕೆಯು ನೆರವೇರಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿ, ‘ಶಿಕ್ಷಕರು ಯಾವುದೆ ಪದೋನ್ನತಿ ಬಯಸದೆ 30-40 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸುತ್ತಾರೆ. ಅವರಿಂದ ಕಲಿತವರು ದೊಡ್ಡ ದೊಡ್ಡ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿದ್ಯಾರ್ಥಿಗಳಲ್ಲಿಯೇ ತಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳುತ್ತಾರೆ’ ಎಂದು ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಾಹಿತಿ ಮಾಯಣ್ಣ, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು, ಕನ್ನಡಾಂಬೆ ಸಾಂಸ್ಕೃತಿಕ ಸಾಮಾಜಿಕ ಟ್ರಸ್ಟ್ ಅಧ್ಯಕ್ಷ ಅಸ್ಗರ್ಖಾನ್, ಮುಖ್ಯ ಶಿಕ್ಷಕರಾದ ವಿ.ರಾಜು, ಬಸವೇಗೌಡ, ವೇದಿಕೆ ಪದಾಧಿಕಾರಿಗಳಾದ ಟಿ.ಎಂ.ರಾಮಯ್ಯ, ಬಿ.ಶಿವಲಿಂಗಯ್ಯ, ತಿಪ್ಪೇಸ್ವಾಮಿ, ರೇಣುಕಾದೇವಿ ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>