<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 1 ಮತ್ತು 2ನೇ ಹಂತದಲ್ಲಿರುವ ಕೆಲವು ಕಾರ್ಖಾನೆಗಳು ತ್ಯಾಜ್ಯದ ನೀರನ್ನು ಚರಂಡಿಗೆ ಹರಿಸುತ್ತಿದ್ದು, ತ್ಯಾಜ್ಯ ನೀರಿನ ಮೂಲಗಳಿಗೆ ಸೇರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಬನ್ನಿಕುಪ್ಪೆ ಗ್ರಾಮದ ಬಳಿಯಿರುವ ಕೆಲವು ಕಾರ್ಖಾನೆಗಳು ತ್ಯಾಜ್ಯದ ನೀರನ್ನು ಚರಂಡಿಗೆ ನೇರವಾಗಿ ಬಿಟ್ಟು ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿವೆ. ಇದರಿಂದ ಬನ್ನಿಕುಪ್ಪೆ ಕೆರೆಗಳು ಕಲುಷಿತಗೊಂಡಿವೆ.</p>.<p>ಇಲ್ಲಿನ ಕಾರ್ಖಾನೆಗಳು ರಾತ್ರಿ ವೇಳೆ ಚರಂಡಿಗಳಿಗೆ ವಿಷಪೂರಿತ ರಾಸಾಯನಿಕಯುಕ್ತಗಳನ್ನು ಹರಿಸುತ್ತಿದ್ದು, ಕುಡಿಯುವ ನೀರಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.</p>.<p>ಕಾರ್ಖಾನೆಗಳು ವಿಷಪೂರಿತ ತ್ಯಾಜ್ಯದ ನೀರನ್ನು ಸಂಸ್ಕರಿಸದೆ ನೇರವಾಗಿ ಚರಂಡಿ ಮೂಲಕ ಹಳ್ಳಕ್ಕೆ ಸೇರುತ್ತಿದೆ. ಹಳ್ಳ ಸೇರಿದ ತ್ಯಾಜ್ಯ ನೇರವಾಗಿ ಕೆರೆ ಸೇರಿ, ಕೆರೆಯ ನೀರು ಕಲುಷಿತಗೊಂಡು ಜಲಚರಗಳಿಗೆ ಮಾರಕವಾಗಿ ಪರಿಣಮಿಸಿದೆ.</p>.<p>ಬನ್ನಿಕುಪ್ಪೆ ಬಳಿ ಆರೇಳು ಕಾರ್ಖಾನೆಗಳು ತ್ಯಾಜ್ಯವನ್ನು ಸಂಸ್ಕರಣೆ ಮಾಡದೆ ನೇರವಾಗಿ ಹಳ್ಳಕ್ಕೆ ಬಿಟ್ಟ ತ್ಯಾಜ್ಯ ಗ್ರಾಮದ ಕೆರೆ ಒಡಲು ಸೇರುತ್ತಿದೆ. ಇದರಿಂದಾಗಿ ಕೆರೆಯ ನೀರು ಕಲುಷಿತಗೊಂಡು ಕೆಟ್ಟ ವಾಸನೆ ಬರುತ್ತಿದೆ. ಹಾಗಾಗಿ ಕಾರ್ಖಾನೆಗಳು ತಮ್ಮ ಆವರಣದಲ್ಲೇ ಎಸ್ಟಿಪಿ ಪ್ಲಾಂಟ್ ಸ್ಥಾಪಿಸಿ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಶುದ್ಧೀಕರಿಸಿ ನಂತರ ಹೊರಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><blockquote>ಕಾರ್ಖಾನೆಗಳು ಮಳೆ ಬಂದು ಹಳ್ಳ ಹರಿಯುವ ಸಮಯದಲ್ಲಿ ರಾತ್ರಿ ವೇಳೆ ತ್ಯಾಜ್ಯವನ್ನು ಹರಿಬಿಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ </blockquote><span class="attribution">-ರಾಜು, ಬನ್ನಿಕುಪ್ಪೆ ಗ್ರಾಮಸ್ಥ</span></div>.<div><blockquote>ರಾಸಾಯನಿಕ ವಿಷಪೂರಿತ ತ್ಯಾಜ್ಯದಿಂದಾಗಿ ಕೆರೆ ಕಲುಷಿತಗೊಂಡು ಗ್ರಾಮಕ್ಕೆ ಶಾಪವಾಗಿ ಕಾಡುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿರುವ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. </blockquote><span class="attribution">-ಶ್ರೀನಿವಾಸ್ ಹುಲ್ಲಿಸಿದ್ದೇಗೌಡನ, ದೊಡ್ಡಿ ಗ್ರಾಮಸ್ಥ</span></div>.<div><blockquote>ಅಕ್ರಮವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕಾರ್ಖಾನೆಗಳ ಪರಿಶೀಲನೆ ನಡೆಸಿ ಕ್ರಮ ಜರುಗಿಸಲಾಗುವುದು </blockquote><span class="attribution">-ಮಂಜುನಾಥ್, ಜಿಲ್ಲಾ ಪರಿಸರ ಇಲಾಖೆ ಅಧಿಕಾರಿ</span></div>.<p>Quote - </p>.<p>Quote -</p>.<p>Quote - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 1 ಮತ್ತು 2ನೇ ಹಂತದಲ್ಲಿರುವ ಕೆಲವು ಕಾರ್ಖಾನೆಗಳು ತ್ಯಾಜ್ಯದ ನೀರನ್ನು ಚರಂಡಿಗೆ ಹರಿಸುತ್ತಿದ್ದು, ತ್ಯಾಜ್ಯ ನೀರಿನ ಮೂಲಗಳಿಗೆ ಸೇರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಬನ್ನಿಕುಪ್ಪೆ ಗ್ರಾಮದ ಬಳಿಯಿರುವ ಕೆಲವು ಕಾರ್ಖಾನೆಗಳು ತ್ಯಾಜ್ಯದ ನೀರನ್ನು ಚರಂಡಿಗೆ ನೇರವಾಗಿ ಬಿಟ್ಟು ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿವೆ. ಇದರಿಂದ ಬನ್ನಿಕುಪ್ಪೆ ಕೆರೆಗಳು ಕಲುಷಿತಗೊಂಡಿವೆ.</p>.<p>ಇಲ್ಲಿನ ಕಾರ್ಖಾನೆಗಳು ರಾತ್ರಿ ವೇಳೆ ಚರಂಡಿಗಳಿಗೆ ವಿಷಪೂರಿತ ರಾಸಾಯನಿಕಯುಕ್ತಗಳನ್ನು ಹರಿಸುತ್ತಿದ್ದು, ಕುಡಿಯುವ ನೀರಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.</p>.<p>ಕಾರ್ಖಾನೆಗಳು ವಿಷಪೂರಿತ ತ್ಯಾಜ್ಯದ ನೀರನ್ನು ಸಂಸ್ಕರಿಸದೆ ನೇರವಾಗಿ ಚರಂಡಿ ಮೂಲಕ ಹಳ್ಳಕ್ಕೆ ಸೇರುತ್ತಿದೆ. ಹಳ್ಳ ಸೇರಿದ ತ್ಯಾಜ್ಯ ನೇರವಾಗಿ ಕೆರೆ ಸೇರಿ, ಕೆರೆಯ ನೀರು ಕಲುಷಿತಗೊಂಡು ಜಲಚರಗಳಿಗೆ ಮಾರಕವಾಗಿ ಪರಿಣಮಿಸಿದೆ.</p>.<p>ಬನ್ನಿಕುಪ್ಪೆ ಬಳಿ ಆರೇಳು ಕಾರ್ಖಾನೆಗಳು ತ್ಯಾಜ್ಯವನ್ನು ಸಂಸ್ಕರಣೆ ಮಾಡದೆ ನೇರವಾಗಿ ಹಳ್ಳಕ್ಕೆ ಬಿಟ್ಟ ತ್ಯಾಜ್ಯ ಗ್ರಾಮದ ಕೆರೆ ಒಡಲು ಸೇರುತ್ತಿದೆ. ಇದರಿಂದಾಗಿ ಕೆರೆಯ ನೀರು ಕಲುಷಿತಗೊಂಡು ಕೆಟ್ಟ ವಾಸನೆ ಬರುತ್ತಿದೆ. ಹಾಗಾಗಿ ಕಾರ್ಖಾನೆಗಳು ತಮ್ಮ ಆವರಣದಲ್ಲೇ ಎಸ್ಟಿಪಿ ಪ್ಲಾಂಟ್ ಸ್ಥಾಪಿಸಿ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಶುದ್ಧೀಕರಿಸಿ ನಂತರ ಹೊರಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><blockquote>ಕಾರ್ಖಾನೆಗಳು ಮಳೆ ಬಂದು ಹಳ್ಳ ಹರಿಯುವ ಸಮಯದಲ್ಲಿ ರಾತ್ರಿ ವೇಳೆ ತ್ಯಾಜ್ಯವನ್ನು ಹರಿಬಿಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ </blockquote><span class="attribution">-ರಾಜು, ಬನ್ನಿಕುಪ್ಪೆ ಗ್ರಾಮಸ್ಥ</span></div>.<div><blockquote>ರಾಸಾಯನಿಕ ವಿಷಪೂರಿತ ತ್ಯಾಜ್ಯದಿಂದಾಗಿ ಕೆರೆ ಕಲುಷಿತಗೊಂಡು ಗ್ರಾಮಕ್ಕೆ ಶಾಪವಾಗಿ ಕಾಡುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿರುವ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. </blockquote><span class="attribution">-ಶ್ರೀನಿವಾಸ್ ಹುಲ್ಲಿಸಿದ್ದೇಗೌಡನ, ದೊಡ್ಡಿ ಗ್ರಾಮಸ್ಥ</span></div>.<div><blockquote>ಅಕ್ರಮವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕಾರ್ಖಾನೆಗಳ ಪರಿಶೀಲನೆ ನಡೆಸಿ ಕ್ರಮ ಜರುಗಿಸಲಾಗುವುದು </blockquote><span class="attribution">-ಮಂಜುನಾಥ್, ಜಿಲ್ಲಾ ಪರಿಸರ ಇಲಾಖೆ ಅಧಿಕಾರಿ</span></div>.<p>Quote - </p>.<p>Quote -</p>.<p>Quote - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>